Featured

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ

ಉಡುಪಿ: ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ.

ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಬೊಮ್ಮಾಯಿ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

13 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

13 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

14 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

14 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

14 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

16 hours ago