Featured

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ : ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ – ವೆರೋನಿಕಾ ಕರ್ನೆಲಿಯೊ

ಉಡುಪಿ: ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ.

ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಬೊಮ್ಮಾಯಿ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago