ಉಡುಪಿ: ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.
ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ.
ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಬೊಮ್ಮಾಯಿ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…