Featured

ಉಡುಪಿ : ಬಿಜೆಪಿ ಮುಂದಿನ ದಿನಗಳಲ್ಲಿ ಮಧ್ವರಾಜ್  ಅವರನ್ನು ಮೂಲೆಗುಂಪು ಮಾಡುವುದು ಖಂಡಿತ : ಕೀರ್ತಿ ಶೆಟ್ಟಿ – Vishwanews24

ಬಿಜೆಪಿ ಮುಂದಿನ ದಿನಗಳಲ್ಲಿಯೂ ಮಧ್ವರಾಜ್  ಅವರನ್ನು ಮೂಲೆಗುಂಪು ಮಾಡುವುದು ಖಂಡಿತ

ತನ್ನನ್ನು ತಾನು ಪ್ರಬಲ ಎಂದು ಹೇಳಿಕೊಳ್ಳುವ ವ್ಯಕ್ತಿ ಹೀನಾಯವಾಗಿ ಸೋತದ್ದು ಮರೆತು ಹೋಯಿತೇ..?

ಈ ಬಾರಿಯ ಚುನಾವಣಾ ಫಲಿತಾಂಶ ಪ್ರಮೋದರ ಭ್ರಮೆಯನ್ನು ಕಳಚಿ ಬಿಸಾಡುತ್ತದೆ

ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ದುರ್ಬಲ ಅಭ್ಯರ್ಥಿ ಎಂದು ಬಣ್ಣಿಸುತ್ತಾ ತಾನು ಹಿಂದೆ ಕಾಂಗ್ರೆಸ್ ನಲ್ಲಿ ಪ್ರಬಲ ಅಭ್ಯರ್ಥಿ ಆಗಿದ್ದೆ ಎಂಬ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಪ್ರಮೋದ್ ಯಾವ ಭ್ರಮೆ ಅಲ್ಲಿ ಬದುಕುತ್ತಾ ಇದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೀರ್ತಿ ಶೆಟ್ಟಿ ಅಂಬಲಪಾಡಿ ಪ್ರಶ್ನಿಸಿದ್ದಾರೆ

ತನ್ನನ್ನು ತಾನು ಪ್ರಬಲ ಎಂದು ಹೇಳಿಕೊಳ್ಳುವ ವ್ಯಕ್ತಿ ತಾನು ಮಂತ್ರಿ ಆಗಿದ್ದಾಗ ಹೀನಾಯವಾಗಿ ಸೋತದ್ದು ಮರೆತು ಹೋಯಿತೇ , ಕಾರ್ಯ ನಿರ್ವಹಣೆಯಲ್ಲಿ ಕರ್ನಾಟಕದಲ್ಲೇ ನಂಬರ್ ಒಂದನೇ ಸ್ಥಾನದಲ್ಲಿದ್ದೆ ಎಂದು ಹೇಳಿಕೊಂಡು ತಿರುಗಾಡುತ್ತಾ ಇದ್ದ ಈ ಪ್ರಮೋದ್ ನಿಜವಾಗಿಯೂ ಪ್ರಬಲ ಆಗಿದ್ದರೆ ಸೋಲುತ್ತಿದ್ದರಾ ? ತನಗೆ ಇಷ್ಟೆಲ್ಲಾ ಸ್ಥಾನ ಮಾನವನ್ನು ನೀಡಿಬೆಳೆಸಿದ ಕಾಂಗ್ರೆಸ್ ಅನ್ನು ತಾನು ಬಿಟ್ಟು ಹೋಗುವಾಗ ಕನಿಷ್ಠ ಒಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಇವರ ಹಿಂದೆ ಹೋಗಿಲ್ಲ, ಇವರು ಯಾವ ಸೀಮೆ ಪ್ರಬಲ ಎಂದೂ ಕೀರ್ತಿ ಶೆಟ್ಟಿಯವರು ಪ್ರಶ್ನಿಸಿದ್ದಾರೆ

ಬಿಜೆಪಿಯಲ್ಲ ತನ್ನ ಅಸ್ತಿತ್ವವನ್ನು ತೋರಿಸಲು ಹೆಣಗಾಡುತ್ತಾ ಇರುವ ಈ ಪ್ರಮೋದ್ ಕಾಂಗ್ರೆಸ್ ವಿರುದ್ಧ ಏನಾದರೂ ಒಂದು ಟೀಕೆ ಮಾಡಬೇಕೆಂಬ ಉದ್ದೇಶಕ್ಕೆ ಏನೇನೋ ವಾಸ್ತವದಿಂದ ದೂರ ಇರುವ ಸಂಗತಿ ಮಾತಾಡುತ್ತಾ ಇದ್ದಾರೆ, ಈ ಬಾರಿಯ ಚುನಾವಣಾ ಫಲಿತಾಂಶ ಪ್ರಮೋದರ ಭ್ರಮೆಯನ್ನು ಕಳಚಿ ಬಿಸಾಡುತ್ತದೆ ,ವಾಸ್ತವದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿಯೂ ಅವರನ್ನು ಮೂಲೆಗುಂಪು ಮಾಡುವುದು ಖಂಡಿತ ಎಂಬುದು ಬಿಜೆಪಿಯ ಈ ಹಿಂದಿನ ಅನೇಕ ನಡವಳಿಕೆ ನೋಡಿದರೆ ಗೊತ್ತಾಗುತ್ತದೆ ಎಂದು ಕೀರ್ತಿ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago