Featured

ಉಡುಪಿ : ಬಿಜೆಪಿ ಮುಂದಿನ ದಿನಗಳಲ್ಲಿ ಮಧ್ವರಾಜ್  ಅವರನ್ನು ಮೂಲೆಗುಂಪು ಮಾಡುವುದು ಖಂಡಿತ : ಕೀರ್ತಿ ಶೆಟ್ಟಿ – Vishwanews24

ಬಿಜೆಪಿ ಮುಂದಿನ ದಿನಗಳಲ್ಲಿಯೂ ಮಧ್ವರಾಜ್  ಅವರನ್ನು ಮೂಲೆಗುಂಪು ಮಾಡುವುದು ಖಂಡಿತ

ತನ್ನನ್ನು ತಾನು ಪ್ರಬಲ ಎಂದು ಹೇಳಿಕೊಳ್ಳುವ ವ್ಯಕ್ತಿ ಹೀನಾಯವಾಗಿ ಸೋತದ್ದು ಮರೆತು ಹೋಯಿತೇ..?

ಈ ಬಾರಿಯ ಚುನಾವಣಾ ಫಲಿತಾಂಶ ಪ್ರಮೋದರ ಭ್ರಮೆಯನ್ನು ಕಳಚಿ ಬಿಸಾಡುತ್ತದೆ

ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ದುರ್ಬಲ ಅಭ್ಯರ್ಥಿ ಎಂದು ಬಣ್ಣಿಸುತ್ತಾ ತಾನು ಹಿಂದೆ ಕಾಂಗ್ರೆಸ್ ನಲ್ಲಿ ಪ್ರಬಲ ಅಭ್ಯರ್ಥಿ ಆಗಿದ್ದೆ ಎಂಬ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಪ್ರಮೋದ್ ಯಾವ ಭ್ರಮೆ ಅಲ್ಲಿ ಬದುಕುತ್ತಾ ಇದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೀರ್ತಿ ಶೆಟ್ಟಿ ಅಂಬಲಪಾಡಿ ಪ್ರಶ್ನಿಸಿದ್ದಾರೆ

ತನ್ನನ್ನು ತಾನು ಪ್ರಬಲ ಎಂದು ಹೇಳಿಕೊಳ್ಳುವ ವ್ಯಕ್ತಿ ತಾನು ಮಂತ್ರಿ ಆಗಿದ್ದಾಗ ಹೀನಾಯವಾಗಿ ಸೋತದ್ದು ಮರೆತು ಹೋಯಿತೇ , ಕಾರ್ಯ ನಿರ್ವಹಣೆಯಲ್ಲಿ ಕರ್ನಾಟಕದಲ್ಲೇ ನಂಬರ್ ಒಂದನೇ ಸ್ಥಾನದಲ್ಲಿದ್ದೆ ಎಂದು ಹೇಳಿಕೊಂಡು ತಿರುಗಾಡುತ್ತಾ ಇದ್ದ ಈ ಪ್ರಮೋದ್ ನಿಜವಾಗಿಯೂ ಪ್ರಬಲ ಆಗಿದ್ದರೆ ಸೋಲುತ್ತಿದ್ದರಾ ? ತನಗೆ ಇಷ್ಟೆಲ್ಲಾ ಸ್ಥಾನ ಮಾನವನ್ನು ನೀಡಿಬೆಳೆಸಿದ ಕಾಂಗ್ರೆಸ್ ಅನ್ನು ತಾನು ಬಿಟ್ಟು ಹೋಗುವಾಗ ಕನಿಷ್ಠ ಒಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಇವರ ಹಿಂದೆ ಹೋಗಿಲ್ಲ, ಇವರು ಯಾವ ಸೀಮೆ ಪ್ರಬಲ ಎಂದೂ ಕೀರ್ತಿ ಶೆಟ್ಟಿಯವರು ಪ್ರಶ್ನಿಸಿದ್ದಾರೆ

ಬಿಜೆಪಿಯಲ್ಲ ತನ್ನ ಅಸ್ತಿತ್ವವನ್ನು ತೋರಿಸಲು ಹೆಣಗಾಡುತ್ತಾ ಇರುವ ಈ ಪ್ರಮೋದ್ ಕಾಂಗ್ರೆಸ್ ವಿರುದ್ಧ ಏನಾದರೂ ಒಂದು ಟೀಕೆ ಮಾಡಬೇಕೆಂಬ ಉದ್ದೇಶಕ್ಕೆ ಏನೇನೋ ವಾಸ್ತವದಿಂದ ದೂರ ಇರುವ ಸಂಗತಿ ಮಾತಾಡುತ್ತಾ ಇದ್ದಾರೆ, ಈ ಬಾರಿಯ ಚುನಾವಣಾ ಫಲಿತಾಂಶ ಪ್ರಮೋದರ ಭ್ರಮೆಯನ್ನು ಕಳಚಿ ಬಿಸಾಡುತ್ತದೆ ,ವಾಸ್ತವದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿಯೂ ಅವರನ್ನು ಮೂಲೆಗುಂಪು ಮಾಡುವುದು ಖಂಡಿತ ಎಂಬುದು ಬಿಜೆಪಿಯ ಈ ಹಿಂದಿನ ಅನೇಕ ನಡವಳಿಕೆ ನೋಡಿದರೆ ಗೊತ್ತಾಗುತ್ತದೆ ಎಂದು ಕೀರ್ತಿ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago