Featured

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ

ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾವು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ನಡೆಸಿತು.

ರಾಜ್ಯ ಸರಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನತೆಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್ಸುಗಳಿದ್ದರೆ ಇಂದು ಸರಕಾರ ಗ್ಯಾರಂಟಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶೇ.50ರಷ್ಟು ಬಸ್ಗಳನ್ನು ಕಡಿತಗೊಳಿಸಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಆರೋಪಿಸಿದರು.

ಇದನ್ನೂ ಓದಿ :

ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ಆಟವಾಡುತ್ತಿದೆ. ಉಡುಪಿಯ ಪರ್ಯಾಯಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ನೀಡದೆ ಅನ್ಯಾಯ ಮಾಡಿದೆ ಎಂದು ಅವರು ದೂರಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿ ಕಚೇರಿಗೆ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆಗೆ ನುಗ್ಗಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ :

ಪ್ರತಿಭಟನೆಯಲ್ಲಿ ಮುಖಂಡರಾದ ಸಂಧ್ಯಾ ರಮೇಶ್, ಅಭಿರಾಜ್ ಸುವರ್ಣ, ಶಿವಕುಮಾರ್ ಅಂಬಲಪಾಡಿ, ಸಚಿನ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

17 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

17 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

18 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

20 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

20 hours ago