ಉಡುಪಿ: ರಾಜ್ಯದ ಯಾವುದೇ ಮೂಲೆಯಲ್ಲಿ ಅಕ್ರಮ ವಿದೇಶಿ ನುಸುಳುಕೋರರ ಬಂಧನವಾದರೆ ಕಾಂಗ್ರೆಸ್ ವಿರುದ್ದ ಆರೋಪ ಮಾಡುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ತಮ್ಮದೇ ಪಕ್ಷದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಿರ್ವಹಿಸುವ ಹೋಟೆಲಿನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದಿರುವ ವಿದೇಶಿಯರನ್ನು ಕೆಲಸಕ್ಕಿಟ್ಟಿರುವ ಕುರಿತು ಮೌನ ವಹಿಸಿರುವುದು ಯಾಕೆ? ದೇಶದ ಭದ್ರತೆಗೆ ಅಪಾಯ ತಂದೊಡ್ಡಬಲ್ಲ ಈ ಗಂಭೀರ ದೇಶದ್ರೋಹ ಪ್ರಕರಣವನ್ನು ಶಾಸಕರು ಸಮರ್ಥಿಸಿಕೊಳ್ಳುವರೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಕ್ರಮ ನುಸುಳುಕೋರರ ಪರ ,ಎಂದು ಹೋದಲೆಲ್ಲಾ ಭಾಷಣ ಬಿಗಿಯುವ,ತಾವೇ ದೊಡ್ಡ ದೇಶ ಭಕ್ತರು ಎಂದು ಪೋಸು ಕೊಡುವ ಶಾಸಕರು ಹಾಗೂ ಬಿಜೆಪಿ ನಾಯಕರಿಗೆ ಉಡುಪಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವಾಗ ದೇಶದ ಭದ್ರತೆಯನ್ನು ಗುತ್ತಿಗೆ ಪಡೆದುಕೊಂಡಿರುವ ಬಿಜೆಪಿಗರಿಗೆ ಆತನ ದೇಶದ್ರೋಹದ ಕೃತ್ಯವನ್ನು ಖಂಡಿಸಲು ನಾಲಿಗೆ ಹೊರಡದಿರುವುದು ವಿಪರ್ಯಾಸ. ಬಿಜೆಪಿಗರು ಹೇಳುವುದು ವೇದಾಂತ ಮಾಡುವುದು ಎಲ್ಲಾ ಅನಾಚಾರ ಎಂಬುದು ಈ ಪ್ರಕರಣ ಮೂಲಕ ಸಾಬೀತಾಗಿದೆ. ಈ ಹಿಂದೆ ಕೂಡ ಬ್ರಹ್ಮಾವರದಲ್ಲಿ ಬಿಜೆಪಿ ಯುವ ಮುಖಂಡ ಮನೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಾಡಿದ್ದು ಕೂಡ ಬೆಳಕಿಗೆ ಬಂದಿತ್ತು. ಬಿಜೆಪಿಗರು ಒಟ್ಟಾರೆಯಾಗಿ ಅಕ್ರಮ ಚಟುವಟಿಕೆಗಳಿಗೆ ನೇರವಾಗಿ ಬೆಂಬಲಿಸುವುದಲ್ಲದೆ ಬಳಿಕ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಇತ್ತೀಚೆಗೆ ಬಿಜೆಪಿಗರು ದೇವರು ಎಂದು ಭಾವಿಸಿರುವ ಉತ್ತರ ಪ್ರದೇಶದ ಯೋಗಿ ಅದಿತ್ಯನಾಥ್ ಅವರು ಆಡಳಿತ ನಡೆಸುವ ರಾಜ್ಯದಿಂದ ಬಂದು ಮಲ್ಪೆಯ ಕೊಚ್ಚಿನ ಶಿಪ್ ಯಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕೆಗಳ ಕುರಿತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿ ಬಂಧನಕ್ಕೆ ಒಳಗಾಗಿದ್ದರು. ಅನ್ಯಾಯವೇ ನಡೆಯಲು ಬಿಡುವುದಿಲ್ಲ ಎನ್ನುವ ಯೋಗಿ ಅವರ ರಾಜ್ಯದ ಜನರು ಕರ್ನಾಟಕದಲ್ಲಿ ಬಂದು ಅಕ್ರಮ ಚಟುವಟಿಕೆ ಮಾಡಿದಾಗಲೂ ಕೂಡ ಬಿಜೆಪಿಗರು ಮೌನವಾಗಿದ್ದರು ಎನ್ನುವುದು ಒಂದು ರೀತಿಯಲ್ಲಿ ಇವರ ದೇಶಪ್ರೇಮದ ಬಗ್ಗೆ ಸಂಶಯ ಮೂಡುತ್ತದೆ.
ಈ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷನ ರೆಸಾರ್ಟ್ ನಲ್ಲಿ ಬಂಧಿಸಿರುವ ಆಕ್ರಮ ನುಸುಳುಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕೊಟ್ಟು ಉದ್ಯೋಗ ನೀಡಿರುವ ಗಂಭೀರ ದೇಶ ದ್ರೋಹದ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…