ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ. ರಮೇಶ್ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ರಮೇಶ್ ಪ್ರಭುವನ್ನು ಬಂಧಿಸಲಾಗಿದೆ.
ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ. ಎನ್. ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…