ಉಡುಪಿ: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದನ್ನು ದಮನಿಸಬೇಕೆಂಬ ನಿಲುವನ್ನು ಹೊಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಸ್ಪೀಕರ್ ರವರನ್ನು ಮುಂದಿಟ್ಟುಕೊಂಡು ತಮ್ಮ ಅಜೆಂಡಾವನ್ನು ಕಾರ್ಯಗತ ಗೊಳಿಸುತ್ತಿರುವುದು ತೀರಾ ಶೋಚನೀಯ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಇಂತಹ ಸಂವಿಧಾನ ಬಾಹೀರ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…