Featured

ಉಡುಪಿ ಬಿಜೆಪಿ ಶಾಸಕ ರಘಪತಿ ಭಟ್ ಸಂಬಂಧಿ, ಇಸ್ಪೀಟ್ ಕ್ಲಬ್‌ನ ಮಾಲಕನ ಭೀಕರ ಕೊಲೆ…!

ಉಡುಪಿ, : ಮಣಿಪಾಲ- ಪೆರಂಪಳ್ಳಿ ರಸ್ತೆಯ ಝೆಪ್ಟಾ ಲಾಂಗ್ ಕಟ್ಟಡದಲ್ಲಿರುವ ಸೆವೆನ್ತ್ ಹೆವೆನ್ ಹೊಟೇಲಿನ ಮೊದಲ ಮಹಡಿಯ ಸೆವೆನ್ತ್ ಆರ್‌ಸಿ ಹೆಸರಿನ ಇಸ್ಪೀಟ್ ಕ್ಲಬ್‌ನ ಮಾಲಕನನ್ನು ದುಷ್ಕರ್ಮಿಗಳ ತಂಡ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜು.29 ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನಡೆದಿದೆ.

ಕೊಲೆಗೀಡಾದವರನ್ನು ಉಡುಪಿ ಪುತ್ತೂರು ಗ್ರಾಮ ಸುಬ್ರಹ್ಮಣ್ಯ ನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ನಿವಾಸಿ ದಿ.ಶ್ರೀಧರ್ ಭಟ್ ಎಂಬವರ ಪುತ್ರ ಗುರುಪ್ರಸಾದ್ ಭಟ್ (44) ಎಂದು ಗುರುತಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಂಡ್ಲೂರು ಚೆಕ್‌ಪೋಸ್ಟ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಡಂಕೂರು ನ್ಯೂ ಕಾಲನಿಯ ಪ್ರದೀಪ್ ಪೂಜಾರಿ (36), ಕಲ್ಯಾಣಪುರದ ಸುಜಿತ್ ಪಿಂಟೋ (35) ಹಾಗೂ ಕುಂಜಿಬೆಟ್ಟು ಕಕ್ಕುಂಜೆಯ ರಾಜೇಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೂರಿಸ್ಟ್ ಬಿಳಿ ಬಣ್ಣದ ಒಮ್ನಿ ಕಾರಿನಲ್ಲಿ ಬಂದ ನಾಲ್ವರು ಕ್ಲಬ್‌ಗೆ ನುಗ್ಗಿ ಗುರುಪ್ರಸಾದ್ ಭಟ್‌ಗೆ ಹಲ್ಲೆ ನಡೆಸಿ ಕುತ್ತಿಗೆಯ ಹಿಂಭಾಗಕ್ಕೆ ಚೂರಿಯಿಂದ ಇರಿದು ಅದೇ ಕಾರಿನಲ್ಲಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡ ಗುರುಪ್ರಸಾದ್ ರನ್ನು ಅದೇ ಕಟ್ಟಡದಲ್ಲಿರುವ ಹೊಟೇಲಿನ ಅಡುಗೆ ಕೆಲಸ ಗಾರರು ಕೂಡಲೇ ಗುರುಪ್ರಸಾದ್‌ರ ಕಾರಿನಲ್ಲೇ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರ ರಕ್ತಸ್ರಾವದಿಂದ ಗುರು ಪ್ರಸಾದ್ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಹಣಕಾಸಿನ ವಿಚಾರಕ್ಕೆ ಕೊಲೆ: ಗುರುಪ್ರಸಾದ್ ಹಲವು ಮಂದಿಯ ಜೊತೆ ಹಣಕಾಸು ವ್ಯವಹಾರ ಹೊಂದಿದ್ದು, ಇದೇ ಕಾರಣಕ್ಕೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆಂಬುದು ತಿಳಿದುಬಂದಿದೆ. ಬಹಳಷ್ಟು ದುಂದು ವೆಚ್ಚ ಮಾಡುತ್ತಿದ್ದ ಗುರುಪ್ರಸಾದ್, ಹಲವು ಮಂದಿಯಿಂದ ಹಣ ಪಡೆದು ಹಿಂತಿರುಗಿಸದೆ ದ್ವೇಷ ಕಟ್ಟಿಕೊಂಡಿದ್ದರು ಎಂದು ಹೇಳಲಾಗಿದೆ.

15ವರ್ಷಗಳ ಹಿಂದೆ ಗುರುಪ್ರಸಾದ್ ಭಟ್ ಹಾಯ್ ಮಾರುತ ಪತ್ರಿಕೆಯ ಹಿತೇಂದ್ರ ಪ್ರಸಾದ್ ಜೊತೆ ಗುರುತಿಸಿಕೊಂಡಿದ್ದರು. ಇವರು ‘ಸತ್ಯ ನ್ಯೂಸ್’ ಹಾಗೂ ‘ನಮ್ಮ ಉಡುಪಿ’ ಎಂಬ ವಾರಪತ್ರಿಕೆಯನ್ನು ನಡೆಸುತ್ತಿದ್ದರು. ಮುಂದೆ ಕಾರ್ ಗ್ಯಾಸ್, ಇನ್ವೈಟರ್, ಸೈಬರ್, ಭೂವ್ಯವಹಾರ, ಮರದ ಕೆತ್ತನೆ ಫ್ಯಾಕ್ಟರಿ ಸೇರಿದಂತೆ ಹಲವು ಉದ್ಯಮಗಳನ್ನು ನಡೆಸಿದ್ದರು. ಇತ್ತೀಚೆಗೆ ಮರದ ಕೆತ್ತನೆಯ ಫ್ಯಾಕ್ಟರಿಯನ್ನು ಮಾರಾಟ ಮಾಡಿದ್ದ ಗುರು ಭಟ್, 2018ರ ಮಾ.12ರಂದು ಈ ಇಸ್ಪೀಟ್ ಕ್ಲಬ್‌ನ್ನು ದಿನ ಬಾಡಿಗೆಗೆ ವಹಿಸಿಕೊಂಡಿದ್ದರು.

ಶನಿವಾರ ತಡರಾತ್ರಿವರೆಗೂ ಗೆಳೆಯರೊಂದಿಗೆ ಇಸ್ಪೀಟು ಆಟ ಆಡುತ್ತಿದ್ದ ಇವರ ಮೊಬೈಲ್‌ಗೆ ಹಲವು ಬಾರಿ ಕೊಲೆ ಬೆದರಿಕೆ ಕರೆ ಬಂದಿತ್ತೆನ್ನಲಾಗಿದೆ. ನಸುಕಿನ ವೇಳೆ ಸುಮಾರು ಮೂರು ಗಂಟೆಗೆ ಗೆಳೆಯರೆಲ್ಲ ಮನೆಗೆ ಹೋದ ನಂತ ಗುರುಪ್ರಸಾದ್ ಕ್ಲಬ್‌ನಲ್ಲೇ ಮಲಗಿದ್ದರು. ಜು.29 ಬೆಳಗ್ಗೆ 9ಗಂಟೆಗೆ ಅವರು ಮತ್ತೆ ಆಟದಲ್ಲಿ ತೊಡಗಿಸಿಕೊಂಡಿದ್ದರು. ಮಧ್ಯಾಹ್ನ 12ಗಂಟೆ ವೇಳೆಗೆ ಎಲ್ಲರೂ ಹೋದ ಬಳಿಕ ಕ್ಲಬ್‌ನ ಕೆಲಸದವರಾದ ಶಂಕರ ಹಾಗೂ ಜಯ ಅವರೊಂದಿಗೆ ಕ್ಲಬ್‌ನಲ್ಲೇ ಇದ್ದರು. ಇದೇ ಸಮಯ ಬಳಸಿಕೊಂಡು ದುಷ್ಕರ್ಮಿ ಗಳು ಕೊಲೆ ಮಾಡಿದ್ದಾರೆ. ಕೊಲೆ ಮಾಡುವ ವೇಳೆ ಕೆಲಸದವರಿಬ್ಬರು ಭೀತಿಯಿಂದ ಅಲ್ಲಿಂದ ಓಡಿ ಹೋಗಿದ್ದರು.

ಬಂಧನಕ್ಕೆ ನೆರವಾದ ಫೂಟೇಜ್: ಈ ಕಟ್ಟಡದಲ್ಲಿ ಸೆವೆನ್ ಹೆವೆನ್ ಬಾರ್, ಹೊಟೇಲು, ಪಬ್, ಲಾಡ್ಜಿಂಗ್, ಕ್ಲಬ್‌ಗಳಿದ್ದು, ಪ್ರತಿಯೊಂದು ಕಡೆಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೆ ಕೊಲೆ ನಡೆದ ಕ್ಲಬ್‌ನಲ್ಲಿಯೂ ಸುಮಾರು ಐದು ಸಿಸಿ ಕ್ಯಾಮೆರಾಗಳಿವೆ.

ದುಷ್ಕರ್ಮಿಗಳು ಬಂದ ಬಿಳಿಬಣ್ಣ ಓಮ್ನಿ ಕಾರು, ಅದರ ನಂಬರ್ ಲಾಡ್ಜ್ ಹೊರಭಾಗದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದರೆ, ಕ್ಲಬ್ ಒಳಗಿನ ಸಿಸಿ ಕ್ಯಾಮೆರಾದಲ್ಲಿ ನಾಲ್ವರು ದುಷ್ಕರ್ಮಿಗಳು ಗುರುಪ್ರಸಾದ್ ಭಟ್‌ಗೆ ಕೈಯಿಂದ ಹೊಡೆದು ಕಾಲಿನಿಂದ ತುಳಿಯುವ ಹಾಗೂ ಮೂವರು ಗುರು ಪ್ರಸಾದ್ ಭಟ್‌ರನ್ನು ಮೊಣಕಾಲಿನಲ್ಲಿ ಕುಳ್ಳಿರಿಸಿ ಕುತ್ತಿಗೆಯನ್ನು ಬಗ್ಗಿಸಿ, ಓರ್ವ ಚೂರಿಯಿಂದ ಅವರ ಕುತ್ತಿಗೆಯ ಹಿಂಭಾಗಕ್ಕೆ ಬಲವಾಗಿ ಇರಿಯುವ ದೃಶ್ಯ ಕೂಡ ದಾಖಲಾಗಿದೆ.

ಕಟ್ಟಡ ಹಾಗೂ ಕ್ಲಬ್‌ನ ಸಿಸಿ ಕ್ಯಾಮೆರಾಗಳ ಫೂಟೇಜ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಗುರುತು ಪತ್ತೆ ಹಚ್ಚಿದರು. ಅಲ್ಲದೆ ನಿನ್ನೆ ರಾತ್ರಿ ಬೆದರಿಕೆ ಕರೆ ಬಂದಿರುವ ಗುರುಪ್ರಸಾದ್ ಭಟ್ ಮೊಬೈಲ್‌ನ್ನು ಕೂಡ ಪೊಲೀಸರು ವಶಪಡಿಸಿಕೊಂಡು, ಅದರಲ್ಲಿನ ಕಾಲ್‌ರೆಕಾರ್ಡ್‌ಗಳನ್ನು ಕೂಡ ಆಲಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚಣೆ ನಡೆಸಿದ್ದರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಮಣಿಪಾಲ ನಿರೀಕ್ಷಕ ಸುದರ್ಶನ್, ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ರಘುಪತಿ ಭಟ್ ಸಂಬಂಧಿ

ಕೊಲೆಯಾದ ಗುರುಪ್ರಸಾದ್ ಭಟ್ ಉಡುಪಿ ಶಾಸಕ ರಘುಪತಿ ಭಟ್ ಸೋದರ ಮಾವನ ಮಗ. ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ಆಗಮಿಸಿದ ಶಾಸಕ ರಘುಪತಿ ಭಟ್ ಮಾಧ್ಯಮದವರೊಂದಿಗೆ ಮಾತನಾಡಿ, ಮೃತ ಗುರು ಭಟ್ ನಮ್ಮ ಸಂಬಂಧಿಕರಾಗಿದ್ದರೂ ನಮ್ಮ ಕುಟುಂಬದೊಂದಿಗೆ ಅವರ ವ್ಯವಹಾರದ ಬಗ್ಗೆ ಮಾತನಾಡುತ್ತಿರಲಿಲ್ಲ. ಇದೆಲ್ಲ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದರು.

ಸೆವೆನ್ತ್ ಹೆವೆನ್ ಹೊಟೇಲಿನಲ್ಲಿರುವ ಇಸ್ಪೀಟ್ ಕ್ಲಬ್ ನಡೆಸಿಕೊಂಡು ಬರು ತ್ತಿದ್ದ ಗುರುಪ್ರಸಾದ್ ಭಟ್ ಎಂಬವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿ ಯಾಗಿದ್ದರು. ನಮ್ಮ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಕಂಡ್ಲೂರು ಚೆಕ್‌ಪೋಸ್ಟ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಮುಂದುವರಿದಿದೆ.
-ಲಕ್ಷ್ಮಣ್ ನಿಂಬರ್ಗಿ, ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago