ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೂ ತೈಲ ಬೆಲೆ ಜೊತೆಗೆ ಅಡುಗೆ ಅನಿಲದ ದರವನ್ನು ಮತ್ತೆ ಮತ್ತೆ ಏರಿಸುತ್ತಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಯೊಂದು ಮನೆಯಲ್ಲಿಯೂ ಅಡುಗೆಗಾಗಿ ಮಹಿಳೆಯರು ಎಲ್ಪಿಜಿ ಬಳಸುವುದು ಅನಿವಾರ್ಯವಾಗಿರುವುದರಿಂದ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಅಡುಗೆ ಅನಿಲ ದರ ಏರಿಸಲಾಗುತ್ತಿದೆ. ಆ ಮೂಲಕ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಗಿಫ್ಟ್ ನೀಡಿದೆ ಎಂದು ರಮೇಶ್ ಕಾಂಚನ್ ವ್ಯಂಗ್ಯವಾಡಿದ್ದಾರೆ.
ಹೊಟೇಲುಗಳಲ್ಲಿ ಬಳಸುವ ಕುಕ್ಕಿಂಗ್ ಗ್ಯಾಸ್ (ಕಮರ್ಷಿಯಲ್) ಬೆಲೆಯನ್ನೂ ಇದೀಗ ಸಿಲಿಂಡರಿಗೆ 160ರಷ್ಟು ಏರಿಕೆ ಮಾಡಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ರೂ. 2000 ದಾಟಿದೆ. ಇದರಿಂದ ಹೊಟೇಲ್ ಉದ್ಯಮವೂ ಸಂಕಷ್ಟಕ್ಕೊಳಗಾಗಲಿದ್ದು, ತಿಂಡಿ ತಿನಿಸುಗಳ ಬೆಲೆ ಏರಿಕೆಯಾಗಲಿದೆ. ಅಚ್ಚೇ ದಿನ್ ನೀಡುವ ಭರವಸೆ ನೀಡಿದ ಸರಕಾರದ ಜನ ವಿರೋಧಿ ಆರ್ಥಿಕ ನೀತಿಯಿಂದಾಗಿ ಲಾಕ್ಡೌನ್ನಿಂದ ತೊದರೆಗೆ ಸಿಲುಕಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದ ಅವರು, ಈ ಕೂಡಲೇ ಗ್ಯಾಸ್ ಸಿಲಿಂಡರ್ ಮೇಲಿನ ತೆರಿಗೆ ಕಡಿತ ಮಾಡಿ ಬೆಲೆ ಇಳಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…