ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೂ ತೈಲ ಬೆಲೆ ಜೊತೆಗೆ ಅಡುಗೆ ಅನಿಲದ ದರವನ್ನು ಮತ್ತೆ ಮತ್ತೆ ಏರಿಸುತ್ತಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಯೊಂದು ಮನೆಯಲ್ಲಿಯೂ ಅಡುಗೆಗಾಗಿ ಮಹಿಳೆಯರು ಎಲ್ಪಿಜಿ ಬಳಸುವುದು ಅನಿವಾರ್ಯವಾಗಿರುವುದರಿಂದ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಅಡುಗೆ ಅನಿಲ ದರ ಏರಿಸಲಾಗುತ್ತಿದೆ. ಆ ಮೂಲಕ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಗಿಫ್ಟ್ ನೀಡಿದೆ ಎಂದು ರಮೇಶ್ ಕಾಂಚನ್ ವ್ಯಂಗ್ಯವಾಡಿದ್ದಾರೆ.
ಹೊಟೇಲುಗಳಲ್ಲಿ ಬಳಸುವ ಕುಕ್ಕಿಂಗ್ ಗ್ಯಾಸ್ (ಕಮರ್ಷಿಯಲ್) ಬೆಲೆಯನ್ನೂ ಇದೀಗ ಸಿಲಿಂಡರಿಗೆ 160ರಷ್ಟು ಏರಿಕೆ ಮಾಡಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ರೂ. 2000 ದಾಟಿದೆ. ಇದರಿಂದ ಹೊಟೇಲ್ ಉದ್ಯಮವೂ ಸಂಕಷ್ಟಕ್ಕೊಳಗಾಗಲಿದ್ದು, ತಿಂಡಿ ತಿನಿಸುಗಳ ಬೆಲೆ ಏರಿಕೆಯಾಗಲಿದೆ. ಅಚ್ಚೇ ದಿನ್ ನೀಡುವ ಭರವಸೆ ನೀಡಿದ ಸರಕಾರದ ಜನ ವಿರೋಧಿ ಆರ್ಥಿಕ ನೀತಿಯಿಂದಾಗಿ ಲಾಕ್ಡೌನ್ನಿಂದ ತೊದರೆಗೆ ಸಿಲುಕಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದ ಅವರು, ಈ ಕೂಡಲೇ ಗ್ಯಾಸ್ ಸಿಲಿಂಡರ್ ಮೇಲಿನ ತೆರಿಗೆ ಕಡಿತ ಮಾಡಿ ಬೆಲೆ ಇಳಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…