ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೂ ತೈಲ ಬೆಲೆ ಜೊತೆಗೆ ಅಡುಗೆ ಅನಿಲದ ದರವನ್ನು ಮತ್ತೆ ಮತ್ತೆ ಏರಿಸುತ್ತಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಯೊಂದು ಮನೆಯಲ್ಲಿಯೂ ಅಡುಗೆಗಾಗಿ ಮಹಿಳೆಯರು ಎಲ್ಪಿಜಿ ಬಳಸುವುದು ಅನಿವಾರ್ಯವಾಗಿರುವುದರಿಂದ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಅಡುಗೆ ಅನಿಲ ದರ ಏರಿಸಲಾಗುತ್ತಿದೆ. ಆ ಮೂಲಕ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಗಿಫ್ಟ್ ನೀಡಿದೆ ಎಂದು ರಮೇಶ್ ಕಾಂಚನ್ ವ್ಯಂಗ್ಯವಾಡಿದ್ದಾರೆ.
ಹೊಟೇಲುಗಳಲ್ಲಿ ಬಳಸುವ ಕುಕ್ಕಿಂಗ್ ಗ್ಯಾಸ್ (ಕಮರ್ಷಿಯಲ್) ಬೆಲೆಯನ್ನೂ ಇದೀಗ ಸಿಲಿಂಡರಿಗೆ 160ರಷ್ಟು ಏರಿಕೆ ಮಾಡಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ರೂ. 2000 ದಾಟಿದೆ. ಇದರಿಂದ ಹೊಟೇಲ್ ಉದ್ಯಮವೂ ಸಂಕಷ್ಟಕ್ಕೊಳಗಾಗಲಿದ್ದು, ತಿಂಡಿ ತಿನಿಸುಗಳ ಬೆಲೆ ಏರಿಕೆಯಾಗಲಿದೆ. ಅಚ್ಚೇ ದಿನ್ ನೀಡುವ ಭರವಸೆ ನೀಡಿದ ಸರಕಾರದ ಜನ ವಿರೋಧಿ ಆರ್ಥಿಕ ನೀತಿಯಿಂದಾಗಿ ಲಾಕ್ಡೌನ್ನಿಂದ ತೊದರೆಗೆ ಸಿಲುಕಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದ ಅವರು, ಈ ಕೂಡಲೇ ಗ್ಯಾಸ್ ಸಿಲಿಂಡರ್ ಮೇಲಿನ ತೆರಿಗೆ ಕಡಿತ ಮಾಡಿ ಬೆಲೆ ಇಳಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…