ಉಡುಪಿ: ಯಾವಾಗೂ ಕೋಮು ಸೌಹಾರ್ದತೆ ವಿಚಾರದಲ್ಲಿ ಬೆಂಕಿ ಕೆಂಡದಂತಿರುವ ಕರಾವಳಿ ಜಿಲ್ಲೆಯಲ್ಲಿ ಬಕ್ರಿದ್ ದಿನದಂದು ವಿಶೇಷ ವಿಚಾರಕ್ಕೆ ಸುದ್ದಿಯಲ್ಲಿದೆ. ಅದರಲ್ಲೂ ಸದಾ ರಸ್ತೆ ಮಧ್ಯೆ ಗಲಾಟೆಗೆ ಸುದ್ದಿಯಾಗುವ ಖಾಸಗಿ ಬಸ್ ಚಾಲಕರು ಹಾಗೂ ನಿರ್ವಾಹಕರು ಈ ಬಾರಿ ಬಕ್ರಿದ್ ಹಬ್ಬವನ್ನು ಸಂಭ್ರಮಿಸಿದ್ದಾರೆ.
ಜೂನ್ 17 ರಂದು ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಪ್ರೀತಿ, ತ್ಯಾಗ, ಬಲಿದಾನದ ಸಂಕೇತವಾಗಿ ಬಕ್ರಿಧ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈ ನಡುವೆ ಉಚ್ಚಿಲದ ಖಾಸಗಿ ಬಸ್ ನ ಮುಸ್ಲಿಂ ಚಾಲಕ, ನಿರ್ವಾಹಕರುಗಳು ತಮ್ಮ ಸಹೋದ್ಯೋಗಿ ಬಸ್ ಚಾಲಕ, ನಿರ್ವಾಹಕರುಗಳಿಗೆ ಬಿರಿಯಾನಿ ಹಂಚಿ ಸಂಭ್ರಮಪಟ್ಟರು.
ಉಡುಪಿ – ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್ ಪ್ರೆಸ್, ಸರ್ವಿಸ್ ಮತ್ತು ಇತರ ಬಸ್ಸುಗಳ ಸುಮಾರು 450 ಮಂದಿಗೆ ಬಕ್ರಿದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು. ಇದೇ ಮಾರ್ಗದಲ್ಲಿ ಸಂಚಾರ ನಡೆಸುವ ಖಾಸಗಿ ಬಸ್ ನ ಸಿಬ್ಬಂದಿಗಳಾದ ಜಾವೇದ್, ಶನವಾಜ್, ನಾಸಿರ್, ನಿಜಾಮ್, ಮೌಜಿ, ಮುನ್ನ ರವರ ತಂಡದ ಈ ಕಾರ್ಯಕ್ಕೆ ವಿವಿಧ ಬಸ್ಸಿನ ಮಾಲಕರು ಮತ್ತು ಇತರ ಸಿಬ್ಬಂದಿಗಳು ಕೂಡಾ ಸಾಥ್ ನೀಡಿದ್ದರು, “ನಾವೆಲ್ಲಾ ಒಂದೆ ವೃತ್ತಿಯನ್ನು ಮಾಡಿಕೊಂಡಿದ್ದು, ಬಕ್ರೀದ್ ಹಬ್ಬದ ಸಂಭ್ರಮವನ್ನು ಇನ್ನಷ್ಟು ಸಂತುಷ್ಟ ಗೊಳಿಸಲು ನಾವು ಬಿರಿಯಾನಿ ನೀಡಿದ್ದೇವೆ” ಎನ್ನುತ್ತಾರೆ ತಂಡದ ಸದಸ್ಯ ಜಾವೇದ್. ಸದಾ ವಿವಿಧ ಕೋಮು ಸೂಕ್ಷ್ಮ ವಿಷಯಗಳಿಗೆ ಸುದ್ದಿಯಲ್ಲಿರುತ್ತಿದ್ದ ಕರಾವಳಿಯಲ್ಲಿ ಇಂತಹ ಯುವಕರ ಸೌಹಾರ್ದದ ನಡೆಗಳು, ಸೌಹಾರ್ಯದತೆಯ ಹೊಸ ಹುರುಪನ್ನು ಮೂಡಿಸಿವೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…