Featured

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ : ಸಂಘಟನೆ ವಿರುದ್ದದ ಆರೋಪಕ್ಕೆ ನಾಳೆಯೊಳಗೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ” ಎಂಬ ಎಚ್ಚರಿಕೆಯನ್ನು ಬಿರುವೆರ್‌ ಕುಡ್ಲ ಸಂಘಟನೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕವೂ ಪತ್ರಿಕಾಗೋಷ್ಠಿ ನಡೆಸಿದ್ದು, “ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಹೇಳಿದೆ.

” ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು” ಎಂದು ಬಿರುವೆರ್ ಕುಡ್ಲಸಂಘಟನೆ ಹೇಳಿದೆ

“ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ” ಎಂದು ಸಂಘಟನೆ ಹೇಳಿದೆ.

“ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾದ್ಯಮ ಸಲಹೆಗಾರ ತೇಜಸ್ ಜೆ ಬಂಗೇರಾ ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

4 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

4 hours ago