Featured

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ : ಸಂಘಟನೆ ವಿರುದ್ದದ ಆರೋಪಕ್ಕೆ ನಾಳೆಯೊಳಗೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ” ಎಂಬ ಎಚ್ಚರಿಕೆಯನ್ನು ಬಿರುವೆರ್‌ ಕುಡ್ಲ ಸಂಘಟನೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕವೂ ಪತ್ರಿಕಾಗೋಷ್ಠಿ ನಡೆಸಿದ್ದು, “ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಹೇಳಿದೆ.

” ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು” ಎಂದು ಬಿರುವೆರ್ ಕುಡ್ಲಸಂಘಟನೆ ಹೇಳಿದೆ

“ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ” ಎಂದು ಸಂಘಟನೆ ಹೇಳಿದೆ.

“ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾದ್ಯಮ ಸಲಹೆಗಾರ ತೇಜಸ್ ಜೆ ಬಂಗೇರಾ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

9 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

9 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

9 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

9 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

12 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago