Featured

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ: ಬಿರುವೆರ್‌ ಕುಡ್ಲ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌  ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ ಬೃಹತ್‌ ಪ್ರತಿಭಟನೆಯ ಎಚ್ಚರಿಕೆ – Vishwanews24

ಉಡುಪಿ : ಸಂಘಟನೆ ವಿರುದ್ದದ ಆರೋಪಕ್ಕೆ ನಾಳೆಯೊಳಗೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ” ಎಂಬ ಎಚ್ಚರಿಕೆಯನ್ನು ಬಿರುವೆರ್‌ ಕುಡ್ಲ ಸಂಘಟನೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕವೂ ಪತ್ರಿಕಾಗೋಷ್ಠಿ ನಡೆಸಿದ್ದು, “ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಹೇಳಿದೆ.

” ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು” ಎಂದು ಬಿರುವೆರ್ ಕುಡ್ಲಸಂಘಟನೆ ಹೇಳಿದೆ

“ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ” ಎಂದು ಸಂಘಟನೆ ಹೇಳಿದೆ.

“ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾದ್ಯಮ ಸಲಹೆಗಾರ ತೇಜಸ್ ಜೆ ಬಂಗೇರಾ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

19 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago