ಉಡುಪಿ : ಬಿಲ್ಲವರ ಸೇವಾಸಂಘ (ರಿ), ಸಂತೆಕಟ್ಟೆ – ಬಿಲ್ಲವರ ಕ್ರೀಡಾ ಕೂಟ ಉದ್ಘಾಟನೆ – Vishwanews24

Featured, ಉಡುಪಿ

ಉಡುಪಿ : ಬಿಲ್ಲವರ ಸೇವಾಸಂಘ (ರಿ), ಸಂತೆಕಟ್ಟೆ – ಬಿಲ್ಲವರ ಕ್ರೀಡಾ ಕೂಟ ಉದ್ಘಾಟನೆ

ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಜಿಲ್ಲೆಗೆ ಹೆಸರು ತಂದ ಕ್ರೀಡಾಪಟುಗಳು ನಮ್ಮಲ್ಲಿದ್ದಾರೆ : ವಿನಯ ಕುಮಾರ್ ಸೊರಕೆ

ಉಡುಪಿ: ಕ್ರೀಡೆ ಸಮಾಜದ ಯುವ ಜನರನ್ನು ಆಕರ್ಷಿಸುವ ಕೆಲಸ ಮಾಡುತ್ತದೆ.ಯುವಜನರ ಭಾವನೆ, ಅಭಿರುಚಿಗೆ ಸರಿಯಾದ ಕ್ರೀಡೆಯನ್ನೆ ಆಯೋಜನೆ ಮಾಡಬೇಕು. ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಜಿಲ್ಲೆಗೆ ಹೆಸರು ತಂದ ಕ್ರೀಡಾಪಟುಗಳು ನಮ್ಮಲ್ಲಿದ್ದಾರೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಯವರುಹೇಳಿದರು.

ಸಂತೆಕಟ್ಟೆ – ಕಲ್ಯಾಣಪುರ ಬಿಲ್ಲವರ ಸೇವಾಸಂಘದ ನೇತೃತ್ವದಲ್ಲಿ ನೇಜಾರು ಮೈದಾನದಲ್ಲಿರವಿವಾರ ಆಯೋಜಿಸಿದ ಸ್ಥಳೀಯ ಬಿಲ್ಲವ ಸಂಘಗಳಿಗೆ ಕ್ರೀಡಾಕೂಟ – 2024 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷ ಬಿ.ಎನ್. ಶಂಕರ ಪೂಜಾರಿ ಕ್ರೀಡೆಗೆ ಚಾಲನೆ ನೀಡದರು. ಸಂಘದ ಅಧ್ಯಕ್ಷ ಶೇಕರ ಗುಜ್ಜರ ಬೆಟ್ಟು ಅಧ್ಯಕ್ಷತೆ ವಹಿಸಿದ್ದರು.

ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜನಾರ್ದನ ತೋನ್ನೆ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಉದ್ಯಮಿ ಸುಗುಣ ಕುಮಾರ್, ಮೂಡುಕುದ್ರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಜತ್ತನ್, ಸಂತೆಕಟ್ಟೆ ಬಿಲ್ಲವರ ಸೇವಾ ಸಂಘದ ಗೌರವ ಅಧ್ಯಕ್ಷ ಭಾಸ್ಕರ ಜತ್ತನ್, ಉಪಾಧ್ಯಕ್ಷ ರಾದ ಶೇಕರ್ ಬಿ.ಪೂಜಾರಿ, ಜಗದೀಶ್ ಕೆಮ್ಮಣ್ಣು, ಅರ್ಚಕ ಶಂಕರ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಉಷಾ ವಸಂತ್, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ಯಾಮ್ ಕೆ.ಪೂಜಾರಿ, ಅಧ್ಯಕ್ಷ ಟಿ‌.ರಾಮ ಪೂಜಾರಿ, ಕ್ರೀಡಾ ಸಂಯೋಜಕ ರಾಕೇಶ್ ಪೂಜಾರಿ ಉಪಸ್ಥಿತರಿದ್ದರು. ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಶೇಕರ್ ಬೈಕಾಡಿ ನಿರೂಪಿಸಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿದರ್ ಸುವರ್ಣ ವಂದಿಸಿದರು.

ಬೆಳ್ತಂಗಡಿ : ಡೆತ್ ನೋಟ್ ಬರೆದಿಟ್ಟು ಯುವತಿ ನೇಣು ಬಿಗಿದು ಆತ್ಮಹತ್ಯೆ – Vishwanews24

Leave a Reply