ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಮಾತ್ರ ಎಂ ಆರ್ ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ.
ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜೀ ಮಾಡದೆ ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು.
ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿಸಿ ವ್ಯತ್ಯಯವಾಗಿರುವ ಸೇವೆಯನ್ನು ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಅಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…