ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಮಾತ್ರ ಎಂ ಆರ್ ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ.
ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜೀ ಮಾಡದೆ ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು.
ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿಸಿ ವ್ಯತ್ಯಯವಾಗಿರುವ ಸೇವೆಯನ್ನು ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಅಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…