Featured

ಉಡುಪಿ : ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಅಧಿಕೃತವಾಗಿ ವಶಕ್ಕೆ ಪಡೆದ ರಾಜ್ಯ ಸರಕಾರ – Vishwanews24

ಉಡುಪಿ : ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಅಧಿಕೃತವಾಗಿ ವಶಕ್ಕೆ ಪಡೆದ ರಾಜ್ಯ ಸರಕಾರ

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಸರಕಾರಿ ಆದೇಶವನ್ನು ಹೊರಡಿಸಿದೆ.

ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆದು ಅಧಿಕೃತ ಸರಕಾರಿ ಆದೇಶ ಹೊರಬಿದ್ದಿದೆ.

ಇದರೊಂದಿಗೆ ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನನ್ನು ಸಹ ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಅಲ್ಲದೇ ಆಸ್ಪತ್ರೆಯ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರಕಾರವೇ ವಹಿಸಿಕೊಂಡಿದೆ.

ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ 7 ಕೋಟಿ ರೂ. ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಅವರ್ತಕ ವೆಚ್ಚವಾಗಿ ವಾರ್ಷಿಕ 2.83 ಕೋಟಿ ರೂ. ಸೇರಿದಂತೆ ಒಟ್ಟು 9.83 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ವಲಯದಿಂದ ಭರಿಸುವುದು ಹಾಗೂ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸರಕಾರದ ವತಿಯಿಂದ ಭರ್ತಿ ಮಾಡುವ ಬಗ್ಗೆ ಸರಕಾರ ಆದೇಶದಲ್ಲಿ ಸಹಮತಿಯನ್ನು ವ್ಯಕ್ತಪಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನಿನಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು, 400 ಹಾಸಿಗೆಗಳ ಸೆಂಟರ್ ಆಫ್ ಎಕ್ಸಲೆನ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಸೌಲಭ್ಯಗಳನ್ನೊಳಗೊಂಡ ಕೇಂದ್ರವನ್ನು ನಿರ್ವಹಿಸಲು ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಷನ್ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಕೆಲವೊಂದು ಷರತ್ತುಗಳನ್ನು ಒಳಪಟ್ಟು ಸರಕಾರ ಅನುಮೋದನೆ ನೀಡಿತ್ತು.

ಆರ್ಥಿಕ ಮುಗ್ಗಟ್ಟಿನಿಂದ ಬಿ.ಆರ್.ಎಸ್.ಸಂಸ್ಥೆ ಆಸ್ಪತ್ರೆಯ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ವಿಫಲವಾದ ಬಳಿಕ ಶಾಸಕ ಕೆ. ರಘುಪತಿ ಭಟ್ ಅವರು ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆಯುವಂತೆ ಇಲಾಖೆ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ್ದರು. ಅವರು ವಿಧಾನಸಭಾ ಅಧಿವೇಶನದಲ್ಲೂ ಈ ವಿಷಯ ಪ್ರಸ್ತಾಪಿಸಿದ್ದರು. ಕಳೆದ ಮಾ.30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರಕ್ಕೆ ಹಸ್ತಾಂತರ ಮಾಡಿ ನಿರ್ಣಯ ಕೈಗೊಳ್ಳಲಾಗಿತ್ತು.

ಸರಕಾರಿ ಆದೇಶದ ಪ್ರಮುಖ ಅಂಶಗಳು

27.10.2016ರ ಸರಕಾರದ ಆದೇಶದ ಅನುಸಾರ ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಷನ್ ಪ್ರೈವೆಲ್ ಲಿ. ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದ್ದ ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಒಟ್ಟು ನಾಲ್ಕು ಎಕರೆ ಜಮೀನನ್ನು ಹಿಂಪಡೆಯಲಾಗಿದೆ.

ಉಡುಪಿಯಲ್ಲಿ ಹಾಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರಕಾರ ವಹಿಸಿಕೊಂಡಿದೆ.

ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ಏಳು ಕೋಟಿ ರೂ. ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಆವರ್ತಕ ವೆಚ್ಚವಾಗಿ ೨.೮೩ ಕೋಟಿ ರೂ.ಗಳು ಸೇರಿದಂತೆ ಒಟ್ಟು ೯.೮೩ ಕೋಟಿ ರೂ.ಗಳ ಅನುದಾನವನ್ನು ರಾಜ್ಯ ವಲಯದಿಂದ ಭರಿಸಲಾಗುವುದು.

ಈ ಆಸ್ಪತ್ರೆಗೆ ಪ್ರಸ್ತುತ ಇರುವ ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಎಂಬ ಹೆಸರನ್ನು ಮುಂದುವರಿಸಲಾಗಿದೆ.

200ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

17 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

17 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

17 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

19 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago