ಉಡುಪಿ

ಉಡುಪಿ: ಬಿ.ಆರ್.ಶೆಟ್ಟಿ ಆಸ್ಪತ್ರೆಯ ಸಿಬಂದಿಗಳ ವೇತನ ಬೇಡಿಕೆಗೆ ತಕ್ಷಣ ಸ್ಪಂದಿಸಿ ಅವರಿಗೆ ಸಿಗಬೇಕಾದ ವೇತನವನ್ನು ನೀಡಿ : ಜಿಲ್ಲಾ ಮಹಿಳಾ ಕಾಂಗ್ರೇಸ್ – Vishwanews 24

ಉಡುಪಿ: ಬಿ.ಆರ್.ಶೆಟ್ಟಿ ಆಸ್ಪತ್ರೆಯ ಸಿಬಂದಿಗಳ ವೇತನ ಬೇಡಿಕೆಗೆ ತಕ್ಷಣ ಸ್ಪಂದಿಸಿ ಅವರಿಗೆ ಸಿಗಬೇಕಾದ ವೇತನವನ್ನು ನೀಡಿ : ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ – Vishwanews 24

ಉಡುಪಿ: ಬಿ.ಆರ್.ಶೆಟ್ಟಿ ಆಸ್ಪತ್ರೆಯ ಸಿಬಂದಿಗಳಿಗೆ ಕಳೆದ ಮೂರು ತಿಂಗಳಿಂದ ವೇತನವನ್ನೇ ನೀಡಿಲ್ಲ ಎನ್ನುವ ವಿಚಾರ ತಿಳಿದು ಬಹಳ ಬೇಸರವಾಯಿತು. ಅವರಿಗೂ ತಮ್ಮದೇ ಆದ ಕುಟುಂಬವಿದೆ. ಅವರಿಗೂ ತಮ್ಮ ಕುಟುಂಬದ ಕುರಿತು ಕೆಲವು ಜವಾಬ್ದಾರಿ ಗಳಿರುತ್ತವೆ. ತಾವು ಮಾಡಿರುವ ಕೆಲಸಕ್ಕೆ ಸಿಗಬೇಕಾದಂತಹ ವೇತನವನ್ನು ಪಡೆಯುವುದು ಪ್ರತೀಯೊಬ್ಬನ ಹಕ್ಕು. ಅದನ್ನು ಕೊಡಬೇಕಾದದ್ದು ಕೆಲಸ ಮಾಡಿಸಿಕೊಳ್ಳುವವನ ಕರ್ತವ್ಯ.

ಹಾಗಿರುವಾಗ ಸದ್ರಿ ಆಸ್ಪತ್ರೆಯ ಸಿಬಂದಿಗಳಿಗೆ ನ್ಯಾಯವಾಗಿ ಸಿಗಬೇಕಾದಂತಹ ವೇತನ ವನ್ನು ತಕ್ಷಣ ನೀಡುವಲ್ಲಿ ಸಂಬಂಧ ಪಟ್ಟವರು ಮುಂದಾಗಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಒತ್ತಾಯಿಸಿದ್ದಾರೆ.

ಈ ಕೋವಿಡ್ ನಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದ ಜನರು ಬದುಕನ್ನು ಕಟ್ಟಿಕೊಳ್ಳಲು ಹೆಣಗುತ್ತಿರುವ ಈ ಸಂದರ್ಭ ದಲ್ಲಿ ಬಿಆರ್ ಎಸ್ ಆಸ್ಪತ್ರೆಯ ಆಡಳಿತವು ಸಿಬಂದಿಗಳ ಊಟದ ಬಟ್ಟಲನ್ನೇ ಕಿತ್ತುಕೊಂಡಿರುವುದು ದುರಾದೃಷ್ಟಕರ ವಿಚಾರ. ಮಾತ್ರವಲ್ಲ ಸಿಬಂದಿಗಳ ಪ್ರಾವಿಡೆಂಟ್ ಫಂಡ್ ಅನ್ನು ತಡೆ ಹಿಡಿದಿರುವುದು ನಿರಂಕುಶ ಪ್ರಭುತ್ವದ ಇನ್ನೊಂದು ಮುಖವನ್ನು ತೋರಿಸುತ್ತಿದೆ. ಕೊರೋನಾ ಸಂದರ್ಭದಲ್ಲಿ ರೋಗಿಗಳ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾದ ಸಿಬಂದಿಗಳು ಇಂದು ತಮ್ಮ ಜೀವನದ ದಾರಿಯನ್ನು ಕಂಡುಕೊಳ್ಳವುದಕ್ಕಾಗಿ ಪ್ರತಿಭಟನೆಯಲ್ಲಿ ತೊಡಗಿಸೀಕೊಳ್ಳುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸ.

ಈ ಕಷ್ಟಕಾಲದಲ್ಲಿ ಅವರಿಗೆ ಹೆಚ್ಚುವರಿ ವೇತನವನ್ನು ನೀಡುವುದರ ಮೂಲಕ ಉದಾತ್ತ ಮನೋಭಾವವನ್ನು ಪ್ರದರ್ಶಿಸ ಬೇಕಾಗಿದ್ದು ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ವೇತನವನ್ನೇ ನೀಡಲು ಹಿಂದೇಟು ಹಾಕುತ್ತಿರುವ ಆಸ್ಪತ್ರೆಯ ಆಡಳಿತದ ವರ್ತನೆ ಯನ್ನು ಮಹಿಳಾ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ.ಆಸ್ಪತ್ರೆಯ ಸಿಬಂದಿಗಳ ವೇತನ ಬೇಡಿಕೆಗೆ ತಕ್ಷಣ ಸ್ಪಂದಿಸಿ ಅವರಿಗೆ ಸಿಗಬೇಕಾದ ವೇತನವನ್ನು ನೀಡಬೇಕು. ಶಾಸಕರಾದ ರಘುಪತಿ ಭಟ್ ಈ ವಿಚಾರದಲ್ಲಿ ಮಧ್ಯೆ ಪ್ರವೇಶಿಸಿ ಸೂಕ್ತ ನ್ಯಾಯವನ್ನು ದೊರಕಿಸಿಕೊಡಬೇಕು ಎಂದು ಗೀತಾ ವಾಗ್ಳೆ ಅವರು ಮನವಿ ಮಾಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago