ಉಡುಪಿ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಘೋಷಣೆಯ ಮೂಲಕ ಅಧಿಕಾರಕ್ಕೆ ಬಂದು ತಾನು ಘೋಷಿಸಿದ 5 ಗ್ಯಾರಂಟಿಗಳು ಕೂಡ ಸಂಪೂರ್ಣವಾಗಿ ವಿಫಲವಾಗಿ ರಾಜ್ಯ ಜನತೆ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.ಮನೆಯ ಯಜಮಾನಿಗೆ ಪ್ರತಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಾರದ ನಾಲ್ಕು ತಿಂಗಳಾಗಿದೆ. ಅನ್ನಭಾಗ್ಯದ ಅಕ್ಕಿಯು ಇಲ್ಲ, ಅದರ ಹಣವು ಪಾವತಿ ಆಗಿಲ್ಲ. ಗೃಹ ಜ್ಯೋತಿ ಭಾಗ್ಯವು ನೆನೆಗುದಿಗೆ ಬಿದ್ದಿದ್ದು ವಿದ್ಯುತ್ ಬಿಲ್ ಏರಿಕೆಯಿಂದ ರಾಜ್ಯದ ಜನರಿಗೆ ಶಾಕ್ ನೀಡಿದೆ.ಯುವ ನಿಧಿಯ ಯೋಜನೆ ಹಳ್ಳ ಹಿಡಿದಿದೆ.ಈ ಎಲ್ಲ ಯೋಜನೆಯನ್ನು ರಾಜ್ಯ ಜನತೆ ತಾವಾಗಿ ಸರ್ಕಾರವನ್ನು ಕೇಳಿದ್ದಲ್ಲ. ಸರ್ಕಾರವೇ ಅವೈಜ್ಞಾನಿಕವಾಗಿ ಘೋಷಣೆ ಮಾಡಿ ಇದೀಗ ರಾಜ್ಯ ಜನತೆಗೆ ಮೋಸ ಮಾಡಿದೆ. ಎಂದು ಉಡುಪಿ ಶಾಸಕ ಯಶ್ನಾಲ್ ಸುವರ್ಣ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದ ಸಣ್ಣ ರೈತರು ಕೂಲಿ ಕಾರ್ಮಿಕರು ಮತ್ತು ಕಡುಬಡವರ ಬಿ.ಪಿ.ಎಲ್. ಕಾರ್ಡ್ ಅನ್ನು ರದ್ದುಗೊಳಿಸುವ ಸರ್ಕಾರದ ಆರನೇ ಗ್ಯಾರಂಟಿಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವ ಹಂತದಲ್ಲಿದೆ .ಇದಕ್ಕೆ ಪೂರಕವಾಗಿ ಸರ್ಕಾರ ಪ್ರತಿ ಗ್ರಾಮದ 400 ಕ್ಕಿಂತಲೂ ಹೆಚ್ಚು ಕುಟುಂಬಗಳ ಬಿ.ಪಿ.ಎಲ್. ಕಾರ್ಡುಗಳ ಪಟ್ಟಿಯನ್ನು ಪರಿಶೀಲನೆಗೆ ಸ್ಥಳೀಯ ರೇಷನ್ ಅಂಗಡಿಗೆ ಕಳಿಸಿದ್ದು ಈ ಪ್ರಕ್ರಿಯೆ ಹಿಂದೆ ಬಡ ಜನರ ಬಿ.ಪಿ.ಎಲ್. ಕಾರ್ಡ್ ರದ್ದಾಗುವ ಭೀತಿ ಎದುರಾಗಿದೆ.
ಯಾವುದೇ ಸಮೀಕ್ಷೆ ನಡೆಸದೆ ಗ್ಯಾರಂಟಿ ಯೋಜನೆಯನ್ನು ನೀಡಲು ಕಷ್ಟವಾಗುತ್ತದೆ ಎಂಬ ಒಂದೇ ಕಾರಣಕ್ಕೆ ಬಿ.ಪಿ.ಎಲ್. ಕಾರ್ಡ್ ರದ್ದುಪಡಿಸಿದರೆ ಬಿಜೆಪಿ ಜನಪತಿನಿಧಿಗಳು ಮತ್ತು ಸೌಲಭ್ಯ ವಂಚಿತ ಫಲಾನುಭವಿಗಳೊಂದಿಗೆ ಉಗ್ರ ಪ್ರತಿಭಟನೆ ಮಾಡಿ ಬಡವರಿಗೆ ನ್ಯಾಯಕೊಡಲು ಸಿದ್ಧ. ಸರ್ಕಾರ ಏಕಾಏಕಿ ಬಿ.ಪಿ.ಎಲ್. ಕಾರ್ಡ್ ರದ್ದು ಪಡಿಸಿದರೆ ಬಿಜೆಪಿ ರಾಜ್ಯ ವ್ಯಾಪಿ ಹೋರಾಟ ನಡೆಸಲಿದೆ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…