ಉಡುಪಿ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಘೋಷಣೆಯ ಮೂಲಕ ಅಧಿಕಾರಕ್ಕೆ ಬಂದು ತಾನು ಘೋಷಿಸಿದ 5 ಗ್ಯಾರಂಟಿಗಳು ಕೂಡ ಸಂಪೂರ್ಣವಾಗಿ ವಿಫಲವಾಗಿ ರಾಜ್ಯ ಜನತೆ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.ಮನೆಯ ಯಜಮಾನಿಗೆ ಪ್ರತಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಾರದ ನಾಲ್ಕು ತಿಂಗಳಾಗಿದೆ. ಅನ್ನಭಾಗ್ಯದ ಅಕ್ಕಿಯು ಇಲ್ಲ, ಅದರ ಹಣವು ಪಾವತಿ ಆಗಿಲ್ಲ. ಗೃಹ ಜ್ಯೋತಿ ಭಾಗ್ಯವು ನೆನೆಗುದಿಗೆ ಬಿದ್ದಿದ್ದು ವಿದ್ಯುತ್ ಬಿಲ್ ಏರಿಕೆಯಿಂದ ರಾಜ್ಯದ ಜನರಿಗೆ ಶಾಕ್ ನೀಡಿದೆ.ಯುವ ನಿಧಿಯ ಯೋಜನೆ ಹಳ್ಳ ಹಿಡಿದಿದೆ.ಈ ಎಲ್ಲ ಯೋಜನೆಯನ್ನು ರಾಜ್ಯ ಜನತೆ ತಾವಾಗಿ ಸರ್ಕಾರವನ್ನು ಕೇಳಿದ್ದಲ್ಲ. ಸರ್ಕಾರವೇ ಅವೈಜ್ಞಾನಿಕವಾಗಿ ಘೋಷಣೆ ಮಾಡಿ ಇದೀಗ ರಾಜ್ಯ ಜನತೆಗೆ ಮೋಸ ಮಾಡಿದೆ. ಎಂದು ಉಡುಪಿ ಶಾಸಕ ಯಶ್ನಾಲ್ ಸುವರ್ಣ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದ ಸಣ್ಣ ರೈತರು ಕೂಲಿ ಕಾರ್ಮಿಕರು ಮತ್ತು ಕಡುಬಡವರ ಬಿ.ಪಿ.ಎಲ್. ಕಾರ್ಡ್ ಅನ್ನು ರದ್ದುಗೊಳಿಸುವ ಸರ್ಕಾರದ ಆರನೇ ಗ್ಯಾರಂಟಿಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವ ಹಂತದಲ್ಲಿದೆ .ಇದಕ್ಕೆ ಪೂರಕವಾಗಿ ಸರ್ಕಾರ ಪ್ರತಿ ಗ್ರಾಮದ 400 ಕ್ಕಿಂತಲೂ ಹೆಚ್ಚು ಕುಟುಂಬಗಳ ಬಿ.ಪಿ.ಎಲ್. ಕಾರ್ಡುಗಳ ಪಟ್ಟಿಯನ್ನು ಪರಿಶೀಲನೆಗೆ ಸ್ಥಳೀಯ ರೇಷನ್ ಅಂಗಡಿಗೆ ಕಳಿಸಿದ್ದು ಈ ಪ್ರಕ್ರಿಯೆ ಹಿಂದೆ ಬಡ ಜನರ ಬಿ.ಪಿ.ಎಲ್. ಕಾರ್ಡ್ ರದ್ದಾಗುವ ಭೀತಿ ಎದುರಾಗಿದೆ.
ಯಾವುದೇ ಸಮೀಕ್ಷೆ ನಡೆಸದೆ ಗ್ಯಾರಂಟಿ ಯೋಜನೆಯನ್ನು ನೀಡಲು ಕಷ್ಟವಾಗುತ್ತದೆ ಎಂಬ ಒಂದೇ ಕಾರಣಕ್ಕೆ ಬಿ.ಪಿ.ಎಲ್. ಕಾರ್ಡ್ ರದ್ದುಪಡಿಸಿದರೆ ಬಿಜೆಪಿ ಜನಪತಿನಿಧಿಗಳು ಮತ್ತು ಸೌಲಭ್ಯ ವಂಚಿತ ಫಲಾನುಭವಿಗಳೊಂದಿಗೆ ಉಗ್ರ ಪ್ರತಿಭಟನೆ ಮಾಡಿ ಬಡವರಿಗೆ ನ್ಯಾಯಕೊಡಲು ಸಿದ್ಧ. ಸರ್ಕಾರ ಏಕಾಏಕಿ ಬಿ.ಪಿ.ಎಲ್. ಕಾರ್ಡ್ ರದ್ದು ಪಡಿಸಿದರೆ ಬಿಜೆಪಿ ರಾಜ್ಯ ವ್ಯಾಪಿ ಹೋರಾಟ ನಡೆಸಲಿದೆ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…