Featured

ಉಡುಪಿ: ಬಿ.ಪಿ.ಎಲ್. ಕಾರ್ಡ್ ರದ್ದು ಪಡಿಸಿದರೆ ಉಗ್ರ ಪ್ರತಿಭಟನೆ , ಬಡವರಿಗೆ ನ್ಯಾಯಕೊಡಲು ಸಿದ್ಧ : ಶಾಸಕ ಯಶ್‌ಪಾಲ್‌ ಸುವರ್ಣ – vishwanews24

ಉಡುಪಿ: ಕಾಂಗ್ರೆಸ್‌ ಪಂಚ ಗ್ಯಾರಂಟಿಗಳು ಸಂಪೂರ್ಣ ವಿಫಲ, ರಾಜ್ಯ ಜನತೆಗೆ ಮೋಸ: ಶಾಸಕ ಯಶ್‌ಪಾಲ್‌ ಸುವರ್ಣ

ಉಡುಪಿ: ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳ ಘೋಷಣೆಯ ಮೂಲಕ ಅಧಿಕಾರಕ್ಕೆ ಬಂದು ತಾನು ಘೋಷಿಸಿದ 5 ಗ್ಯಾರಂಟಿಗಳು ಕೂಡ ಸಂಪೂರ್ಣವಾಗಿ ವಿಫಲವಾಗಿ ರಾಜ್ಯ ಜನತೆ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.ಮನೆಯ ಯಜಮಾನಿಗೆ ಪ್ರತಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಾರದ ನಾಲ್ಕು ತಿಂಗಳಾಗಿದೆ. ಅನ್ನಭಾಗ್ಯದ ಅಕ್ಕಿಯು ಇಲ್ಲ, ಅದರ ಹಣವು ಪಾವತಿ ಆಗಿಲ್ಲ. ಗೃಹ ಜ್ಯೋತಿ ಭಾಗ್ಯವು ನೆನೆಗುದಿಗೆ ಬಿದ್ದಿದ್ದು ವಿದ್ಯುತ್ ಬಿಲ್ ಏರಿಕೆಯಿಂದ ರಾಜ್ಯದ ಜನರಿಗೆ ಶಾಕ್‌ ನೀಡಿದೆ.ಯುವ ನಿಧಿಯ ಯೋಜನೆ ಹಳ್ಳ ಹಿಡಿದಿದೆ.ಈ ಎಲ್ಲ ಯೋಜನೆಯನ್ನು ರಾಜ್ಯ ಜನತೆ ತಾವಾಗಿ ಸರ್ಕಾರವನ್ನು ಕೇಳಿದ್ದಲ್ಲ. ಸರ್ಕಾರವೇ ಅವೈಜ್ಞಾನಿಕವಾಗಿ ಘೋಷಣೆ ಮಾಡಿ ಇದೀಗ ರಾಜ್ಯ ಜನತೆಗೆ ಮೋಸ ಮಾಡಿದೆ. ಎಂದು ಉಡುಪಿ ಶಾಸಕ ಯಶ್ನಾಲ್ ಸುವರ್ಣ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದ ಸಣ್ಣ ರೈತರು ಕೂಲಿ ಕಾರ್ಮಿಕರು ಮತ್ತು ಕಡುಬಡವರ ಬಿ.ಪಿ.ಎಲ್. ಕಾರ್ಡ್ ಅನ್ನು ರದ್ದುಗೊಳಿಸುವ ಸರ್ಕಾರದ ಆರನೇ ಗ್ಯಾರಂಟಿಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವ ಹಂತದಲ್ಲಿದೆ .ಇದಕ್ಕೆ ಪೂರಕವಾಗಿ ಸರ್ಕಾರ ಪ್ರತಿ ಗ್ರಾಮದ 400 ಕ್ಕಿಂತಲೂ ಹೆಚ್ಚು ಕುಟುಂಬಗಳ ಬಿ.ಪಿ.ಎಲ್. ಕಾರ್ಡುಗಳ ಪಟ್ಟಿಯನ್ನು ಪರಿಶೀಲನೆಗೆ ಸ್ಥಳೀಯ ರೇಷನ್ ಅಂಗಡಿಗೆ ಕಳಿಸಿದ್ದು ಈ ಪ್ರಕ್ರಿಯೆ ಹಿಂದೆ ಬಡ ಜನರ ಬಿ.ಪಿ.ಎಲ್. ಕಾರ್ಡ್‌ ರದ್ದಾಗುವ ಭೀತಿ ಎದುರಾಗಿದೆ.

ಯಾವುದೇ ಸಮೀಕ್ಷೆ ನಡೆಸದೆ ಗ್ಯಾರಂಟಿ ಯೋಜನೆಯನ್ನು ನೀಡಲು ಕಷ್ಟವಾಗುತ್ತದೆ ಎಂಬ ಒಂದೇ ಕಾರಣಕ್ಕೆ ಬಿ.ಪಿ.ಎಲ್. ಕಾರ್ಡ್ ರದ್ದುಪಡಿಸಿದರೆ ಬಿಜೆಪಿ ಜನಪತಿನಿಧಿಗಳು ಮತ್ತು ಸೌಲಭ್ಯ ವಂಚಿತ ಫಲಾನುಭವಿಗಳೊಂದಿಗೆ ಉಗ್ರ ಪ್ರತಿಭಟನೆ ಮಾಡಿ ಬಡವರಿಗೆ ನ್ಯಾಯಕೊಡಲು ಸಿದ್ಧ. ಸರ್ಕಾರ ಏಕಾಏಕಿ ಬಿ.ಪಿ.ಎಲ್. ಕಾರ್ಡ್ ರದ್ದು ಪಡಿಸಿದರೆ ಬಿಜೆಪಿ ರಾಜ್ಯ ವ್ಯಾಪಿ ಹೋರಾಟ ನಡೆಸಲಿದೆ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಸರ್ಕಾರವನ್ನು ಎಚ್ಚರಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

4 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

5 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago