ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ – vishwanews24

Featured, ಉಡುಪಿ

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮಕ್ಕೆ ಸೂಚನೆ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದರ ಮೇಲ್ವಿಚಾರಣೆ ನಡೆಸಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಸೂಚಿಸಲಾಗಿದೆ.

ಉಡುಪಿ: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರೂ. 500 ಕೋಟಿ ಅನುದಾನ ನೀಡಲು ಸಿಎಂ ಗೆ ಮನವಿ : ಮಂಜುನಾಥ ಪೂಜಾರಿ – vishwanews24

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಮತ್ತೆ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply