ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದರ ಮೇಲ್ವಿಚಾರಣೆ ನಡೆಸಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಸೂಚಿಸಲಾಗಿದೆ.
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಮತ್ತೆ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…