Featured

ಉಡುಪಿ : ಬುಡಕಟ್ಟು ಜನಾಂಗದವರು ಒಗ್ಗಟ್ಟಿನಲ್ಲಿದ್ದರೆ ಯಶಸ್ಸು : ದಿನಕರ ಬಾಬು -Vishwanews24

ಉಡುಪಿ :ಬುಡಕಟ್ಟು ಜನಾಂಗದವರು ಒಗ್ಗಟ್ಟಿನಲ್ಲಿದ್ದರೆ ಯಶಸ್ಸು : ದಿನಕರ ಬಾಬು -Vishwanews24

ಉಡುಪಿ : ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಕೊರಗ ಕ್ರೀಡೋತ್ಸವವು ಬುಡಕಟ್ಟು ಜನಾಂಗಗಳನ್ನು ಮುಖ್ಯವಾಹಿನಿಗೆ ತರುವ ಮುಖ್ಯ ಉದ್ಧೇಶವಾಗಿದೆ. ಯಾವುದೇ ಯಶಸ್ಸನ್ನು ಸಾಧಿಸಬೇಕಾದರೆ ಬುಡಕಟ್ಟು ಜನಾಂಗದವರು ಒಗ್ಗಟ್ಟಿನಿಂದ ಇರಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ದಿನಕರ ಬಾಬು ಹೇಳಿದ್ದಾರೆ.

ಅವರು, ಎಂಜಿ ಎಂ ಕಾಲೇಜು ಮೈದಾನದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಮೂರು ದಿನದ ಕೊರಗ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ಪ್ರಥಮ ದಿನದ ಕ್ರಿಕೆಟ್ ಪಂದ್ಯಗಳ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊರಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಯಾವಾಗಲು ಸಿದ್ದವಾಗಿದೆ. ಈ ಸಮುದಾಯದ ಯುವಕರು ಉತ್ಸಾಹವನ್ನು ತೊರಿಸಬೇಕು. ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸುವ ರೀತಿಯಲ್ಲಿಯೇ, ಉತ್ತಮವಾದ ಸಮಾಜ ಕಟ್ಟುವ ಕಾರ್ಯಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಇಲ್ಲಿ ನಡೆಯುತ್ತಿರುವ ಕ್ರೀಡೋತ್ಸವದಲ್ಲಿ ಉತ್ತಮ ಸಾಧನೆ ತೋರುವ ಯುವ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ, ಅವರಿಗೆ ಉತ್ತಮ ತರಬೇತಿಯನ್ನು ನೀಡಿ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಭಾಗವಹಿಸಲು ಬೇಕಾಗುವ ಹಣದ ಸಹಾಯವನ್ನು ಸರ್ಕಾರದಿಂದ ಅಥವಾ ಐ.ಟಿ.ಡಿ.ಪಿ. ಇಲಾಖೆ ವತಿಯಿಂದ ನೀಡಲಾಗುವುದು ಎಂದು ಡಿಸಿ ಹೇಳಿದರು.

ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24

ಕೊರಗ ಸಮುದಾಯದವರಲ್ಲಿ ಅಭಿವೃದ್ಧಿಯಾಗುವ ಛಲ ಕಂಡುಬರುತ್ತಿದೆ. ಕ್ರೀಡೆಯ ಜೊತೆಗೆ ತಮ್ಮ ಸಾಂಸ್ಕೃತಿಕ ಕಲೆಗಳನ್ನು ಉಳಿಸಿ ಬೆಳೆಸಬೇಕು. ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯವಾಹಿನಿಗೆ ಕರೆದುಕೊಂಡು ಬರಬೇಕು ಎಂದು ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರ ನಾಯಕ್ ಹೇಳಿದರು
ಪ್ರಾಸ್ತಾವಿಕವಾಗಿ ಮಾತನಾಡಿದ ಸಮುದಾಯದ ಬಾಬು ಪಾಂಗಳ, ಕೊರಗ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ಮುಖ್ಯ ಉದ್ದೇಶ ಕೊರಗ ಸಮುದಾಯದ ಯುವಕರನ್ನು ಮುಖ್ಯ ವಾಹಿನಿಗೆ ತರುವುದು ಮತ್ತು ಅವರನ್ನು ಅಭಿವೃದ್ಧಿಶೀಲರನ್ನಾಗಿ ಮಾಡುವುದು. ಸಮುದಾಯದವರು ಕಾಲಹರಣ ಮಾಡದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ರಕ್ತದಾನದಂತಹ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯುವಕರು ಕೇವಲ ಕ್ರೀಡೆಗಳಿಗೆ ಸೀಮಿತರಾಗದೆ ಬಹುಮುಖ ಪ್ರತಿಭೆಗಳಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕೊರಗ ಸಮುದಾಯದ ಮುಖ್ಯಸ್ಥ ಗಣೇಶ್ ಕುಂದಾಪುರ ಮತ್ತಿತರರು ಉಪಸ್ಥಿತರಿದ್ದರು. ರಾಜ್‌ಶೇಖರ್ ಉಡುಪಿ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago