Featured

ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ – vishwanews24

ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಅದಿ ಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಲ್ಪೆ ಆದಿ ಉಡುಪಿ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬದಿಂದ ಕುಂಠಿತವಾಗಿದ್ದು ಈಗಾಗಲೇ ಭೂ ಮಾಲೀಕರಿಗೆ ಪರಿಹಾರ ಪಾವತಿಯ ಮೊತ್ತದ ಬಗ್ಗೆ ನೋಟಿಸ್ ನೀಡಲಾಗಿದೆ.

ಭೂ ಸ್ವಾಧೀನ ಪ್ರಕ್ರಿಯೆಯ 214 ಕಡತಗಳ ಪೈಕಿ 19 ಸರ್ಕಾರಿ ಜಮೀನು ಹೊರತುಪಡಿಸಿ 195 ಖಾಸಗಿ ಜಮೀನು ಮಾಲಿಕರ ಪೈಕಿ 51 ನೋಟೀಸ್ ಸ್ವೀಕರಿಸಿದ್ದು, 48 ಮಂದಿ ಪರಿಹಾರ ಮೊತ್ತ ಪಡೆಯಲು ತಮ್ಮ ದಾಖಲಾತಿಗಳನ್ನು ಒದಗಿಸಿದ್ದಾರೆ. ಬಾಕಿ ಇರುವ 144 ಜಮೀನು ಮಾಲಕರನ್ನು ಸಂಪರ್ಕಿಸಿ ನೋಟೀಸ್ ನೀಡುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಬುಧವಾರದಿಂದಲೇ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ ಮಾಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಪರ್ಕಳ ಹೆದ್ದಾರಿ ಕಾಮಗಾರಿ ನ್ಯಾಯಾಲಯ ತಡೆಯಾಜ್ಞೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವು ಸರ್ಕಾರದ ಪರವಾಗಿ ಬಂದಿದ್ದು, ಭೂ ಮಾಲೀಕರಿಗೆ ಕೂಡಲೇ ಪರಿಹಾರದ ಹಣ ನೀಡಬೇಕು, ಕಾಮಗಾರಿ ಪ್ರಾರಂಭಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಪೆರ್ಡೂರಿನ ದೇವಸ್ಥಾನ ಸಮೀಪದ 600 ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ಸಂಬಂಧ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಅದನ್ನು ಬಿಟ್ಟು ಉಳಿದ ಕಡೆ ಕಾಮಗಾರಿ ಕೈಗೊಳ್ಳಬೇಕು. ದೇವಸ್ಥಾನ, ಕಲ್ಯಾಣಿಯ ಮೂಲ ಸ್ವರೂಪಕ್ಕೆ ಧಕ್ಕೆ ಆಗಬಾರದೆಂಬುದು ಭಕ್ತರ ಬೇಡಿಕೆ. ಅದನ್ನು ಮನಗಂಡು ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಶ್ರೀ ಮಹೇಶ್ ಚಂದ್ರ, ರಾಷ್ಟೀಯ ಹೆದ್ದಾರಿ 169 ಎ ಅಧಿಕಾರಿಗಳಾದ ಶ್ರೀ ಮಂಜುನಾಥ ಗೌಡ, ನವೀನ್ ರಾಜ್, ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago