ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಬ್ ಹಕ್ಕಿಗಾಗಿ 8 ಮುಸಲ್ಮಾನ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದಾರೆ. ಕಾಲೇಜಿಗೆ ಹಿಂದೂ ಜಾಗರಣಾ ವೇದಿಕೆ ಭೇಟಿ ನೀಡಿದೆ. ಶಾಲೆ ಕಾಲೇಜಿನಲ್ಲಿ ಸಮವಸ್ತ್ರ, ಸಮಾನತೆ ಇರಬೇಕು. ಬುರ್ಖಾ, ಟೋಪಿ ಕೇಳಿ ಮುಂದೆ ಷರಿಯತ್ ಕಾನೂನು ಕೇಳುತ್ತಾರೆ ಕೊಡುತ್ತೀರಾ ಎಂದು ಪ್ರಶ್ನೆ ಮಾಡಿದೆ.
ಮತೀಯ ಸಂಘಟನೆಯೊಂದು ವಿದ್ಯಾರ್ಥಿಗಳಿಗೆ ವಿಷ ಬೀಜ ಬಿತ್ತಿದೆ. ದೇಶದ ಮಾನ ಹರಣಕ್ಕೆ ಅಂತರಾಷ್ಟ್ರೀಯ ಷಡ್ಯಂತ್ರ ನಡೆಯುತ್ತಿದೆ. ಉಡುಪಿಯ ಶೈಕ್ಷಣಿಕ ಖ್ಯಾತಿ ಕುಗ್ಗಿಸಲು ಷಡ್ಯಂತ್ರ ನಡೆಯುತ್ತಿದೆ. ಶೈಕ್ಷಣಿಕ ವಾತಾವರಣ ಕೆಡಿಸಲು ಹಿಂದೂ ಜಾಗರಣಾ ವೇದಿಕೆ ಬಿಡುವುದಿಲ್ಲ. ಕಾಲೇಜಲ್ಲಿ ಇಸ್ಲಾಂ ಕಾನೂನು ಜಾರಿಗೆ ತರುವ ಅವಕಾಶ ಕೊಡಬಾರದು. ಇವರಿಗೆ ಸರ್ಕಾರಿ ಶಿಕ್ಷಣ ಬೇಡದಿದ್ದರೆ ಮದರಾಸ ಶಿಕ್ಷಣ ಪಡೆಯಿರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ :
ಹಿರಿಯ ಅಧಿಕಾರಿಗಳು ಪ್ರಾಂಶುಪಾಲರಿಗೆ ಒತ್ತಡ ಹಾಕುತ್ತಿರುವ ಬಗ್ಗೆ ಸಂಘಟನೆ ಗಮನಕ್ಕೆ ಬಂದಿದೆ. ಸರ್ಕಾರ, ಇಲಾಖೆ ಮೂಲಭೂತ ಮತೀಯ ಸಂಘಟನೆಗೆ ಬೆಂಬಲ ನೀಡಿದರೆ ನಾವು ಸಹಿಸಲ್ಲ. ಮುಸಲ್ಮಾನ ವಿದ್ಯಾರ್ಥಿಗಳು ಇಷ್ಟು ವರ್ಷ ಇಲ್ಲದ ವಿವಾದ ಶುರು ಮಾಡಿದ್ದಾರೆ. ನೂರು ಮುಸಲ್ಮಾನ ಹೆಣ್ಮಕ್ಕಳಲ್ಲಿ ಎಂಟು ಮಂದಿಯದ್ದು ಮಾತ್ರವಲ್ಲ ತಕರಾರು, ಶಿಕ್ಷಣಕ್ಕೆ ಧಾರ್ಮಿಕತೆ ಬೆರೆಸಿದರೆ ಇದು ಸರಿಯಲ್ಲ.
ಸರ್ಕಾರ ಜಾತಿ ಮತ ಧರ್ಮದ ಎಲ್ಲೆ ಮೀರಲು ಸಮವಸ್ತ್ರ ತಂದಿದೆ. ವೈಯಕ್ತಿಕ ಸ್ವಾತಂತ್ರ್ಯ ಹೇಳುತ್ತಾ ಟೋಪಿ ಬುರ್ಖಾ, ಶರಿಯಾ ಕಾನೂನಿಗೆ ಒತ್ತಾಯಿಸುವ ಹುನ್ನಾರ ನಡೆಯುತ್ತಿದೆ. ಹಿಂದು ಜಾಗರಣ ವೇದಿಕೆ ಈವರೆಗೆ ಎಲ್ಲವನ್ನು ಸೂಕ್ಷ್ಮವಾಗಿ ನೋಡಿದೆ ಇನ್ನೂ ಈ ರೀತಿಯ ಬೆಳವಣಿಗೆಗಳಿಗೆ ಅವಕಾಶ ನೀಡುವುದಿಲ್ಲ.
ಇದನ್ನೂ ಓದಿ :
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…