ಉಡುಪಿ :ಅಂಬಲಪಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (50) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೇ ಘಟನೆಯಿಂದ ಆಕೆಯ ಪತಿ ರಮಾನಂದ ಶೆಟ್ಟಿ (55) ಜೂನ್ 15 ರಂದು ನಿಧನರಾದರು.
ಜೂನ್ 15 ರಂದು ರಮಾನಂದ ಮತ್ತು ಅಶ್ವಿನಿ ಶೆಟ್ಟಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಗೆ ಹೆಚ್ಚಿನ ಹಾನಿ ಮತ್ತು ನಿವಾಸಿಗಳಿಗೆ ಗಾಯಗಳಾಗಿವೆ. ಮೂರು ಅಂತಸ್ತಿನ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ, ತನಿಖೆಯಲ್ಲಿದೆ.
ಜೂನ್ 15 ರಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮನೆಯೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯಾಚರಣೆ ನಡೆಸಬೇಕಾಯಿತು. ಬಾತ್ ರೂಂನಲ್ಲಿ ಅಡಗಿಕೊಂಡಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…