ಉಡುಪಿ: ನಗರದ ಹೃದಯಭಾಗವಾದ ಸಿಟಿಬಸ್ ನಿಲ್ದಾಣ ಸಮೀಪ ಸಂಭವಿಸಿದ ಅಗ್ನಿ ಅವಘಡವು ತೀವ್ರ ಚಿಂತೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ವಿಶೇಷವಾಗಿ ಮೊಬೈಲ್ ಅಂಗಡಿಗಳಿಗೆ ಸಂಭವಿಸಿದ ಅಪಾರ ನಷ್ಟ ನೋವಿನ ಸಂಗತಿಯಾಗಿದೆ. ಮೊಬೈಲ್ ರಿಟೈಲ್ ವ್ಯಾಪಾರಿಗಳ ಜೀವನಾಧಾರವಾದ್ದ ಅಂಗಡಿಯೇ ಹಾನಿಗೊಳಗಾಗಿರುವುದು ಅತ್ಯಂತ ವಿಷಾದನೀಯ.
ನಗರದ ಕಿನ್ನಿಮೂಲ್ಕಿಯಲ್ಲಿ ಅಗ್ನಿಶಾಮಕ ದಳದ ಮುಖ್ಯ ಕಚೇರಿ ಮತ್ತು ಎಲ್ಲಾ ವಾಹನ ಸಹಿತ ಅಗತ್ಯ ಸೌಕರ್ಯಗಳಿದ್ದರೂ, ಅವಘಡ ನಡೆದ ಸ್ಥಳ ಅಲ್ಲಿಂದ 1ರಿಂದ 2 ಕಿ.ಮೀ. ದೂರದಲ್ಲಿದ್ದರೂ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಲುಪಲು ಸುಮಾರು 40 ರಿಂದ 45 ನಿಮಿಷಗಳಷ್ಟು ವಿಳಂಬವಾಗಿರುವುದು ಗಂಭೀರ ನಿರ್ಲಕ್ಷ್ಯದ ಸೂಚಕವಾಗಿದೆ. ಈ ವಿಳಂಬವೇ ಬೆಂಕಿ ಅವಘಡದ ತೀವ್ರತೆ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:
ಇಂತಹ ನಿರ್ಲಕ್ಷ್ಯ ಭವಿಷ್ಯದಲ್ಲಿ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸ್ಪಂದನೆ ನೀಡುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಅನಿವಾರ್ಯವಾಗಿದೆ. ಜಿಲ್ಲಾಡಳಿತವು ಈ ಘಟನೆಗೆ ಗಂಭೀರವಾಗಿ ಸ್ಪಂದಿಸಿ, ಅಗ್ನಿಶಾಮಕ ದಳದ ಕಾರ್ಯಪದ್ದತಿಯಲ್ಲಿ ಉಂಟಾದ ವಿಳಂಬದ ಕುರಿತು ಸಮಗ್ರ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜತೆಗೆ, ಹಾನಿಗೊಳಗಾದ ವ್ಯಾಪಾರಿಗಳಿಗೆ ತಕ್ಷಣ ಪರಿಹಾರ ಒದಗಿಸಿ, ಅವರ ಜೀವನೋಪಾಯವನ್ನು ಪುನಃ ಸ್ಥಾಪಿಸಲು ನೆರವಾಗಬೇಕು.
ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರ ಭದ್ರತೆ ಖಚಿತಪಡಿಸಬೇಕು ಎಂದು ಉಡುಪಿ ಮೊಬೈಲ್ ರಿಟೈಲ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ವಿವೇಕ ಜಿ ಸುವರ್ಣ ಆಗ್ರಹಿಸಿದ್ದಾರೆ..
ಇದನ್ನೂ ಓದಿ:
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…