Featured

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ

ಉಡುಪಿ: ನಗರದ ಹೃದಯಭಾಗವಾದ ಸಿಟಿಬಸ್ ನಿಲ್ದಾಣ ಸಮೀಪ ಸಂಭವಿಸಿದ ಅಗ್ನಿ ಅವಘಡವು ತೀವ್ರ ಚಿಂತೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ವಿಶೇಷವಾಗಿ ಮೊಬೈಲ್ ಅಂಗಡಿಗಳಿಗೆ ಸಂಭವಿಸಿದ ಅಪಾರ ನಷ್ಟ ನೋವಿನ ಸಂಗತಿಯಾಗಿದೆ. ಮೊಬೈಲ್‌ ರಿಟೈಲ್‌ ವ್ಯಾಪಾರಿಗಳ ಜೀವನಾಧಾರವಾದ್ದ ಅಂಗಡಿಯೇ ಹಾನಿಗೊಳಗಾಗಿರುವುದು ಅತ್ಯಂತ ವಿಷಾದನೀಯ.

ನಗರದ ಕಿನ್ನಿಮೂಲ್ಕಿಯಲ್ಲಿ ಅಗ್ನಿಶಾಮಕ ದಳದ ಮುಖ್ಯ ಕಚೇರಿ ಮತ್ತು ಎಲ್ಲಾ ವಾಹನ ಸಹಿತ ಅಗತ್ಯ ಸೌಕರ್ಯಗಳಿದ್ದರೂ, ಅವಘಡ ನಡೆದ ಸ್ಥಳ ಅಲ್ಲಿಂದ 1ರಿಂದ 2 ಕಿ.ಮೀ. ದೂರದಲ್ಲಿದ್ದರೂ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಲುಪಲು ಸುಮಾರು 40 ರಿಂದ 45 ನಿಮಿಷಗಳಷ್ಟು ವಿಳಂಬವಾಗಿರುವುದು ಗಂಭೀರ ನಿರ್ಲಕ್ಷ್ಯದ ಸೂಚಕವಾಗಿದೆ. ಈ ವಿಳಂಬವೇ ಬೆಂಕಿ ಅವಘಡದ ತೀವ್ರತೆ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಇಂತಹ ನಿರ್ಲಕ್ಷ್ಯ ಭವಿಷ್ಯದಲ್ಲಿ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸ್ಪಂದನೆ ನೀಡುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಅನಿವಾರ್ಯವಾಗಿದೆ. ಜಿಲ್ಲಾಡಳಿತವು ಈ ಘಟನೆಗೆ ಗಂಭೀರವಾಗಿ ಸ್ಪಂದಿಸಿ, ಅಗ್ನಿಶಾಮಕ ದಳದ ಕಾರ್ಯಪದ್ದತಿಯಲ್ಲಿ ಉಂಟಾದ ವಿಳಂಬದ ಕುರಿತು ಸಮಗ್ರ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜತೆಗೆ, ಹಾನಿಗೊಳಗಾದ ವ್ಯಾಪಾರಿಗಳಿಗೆ ತಕ್ಷಣ ಪರಿಹಾರ ಒದಗಿಸಿ, ಅವರ ಜೀವನೋಪಾಯವನ್ನು ಪುನಃ ಸ್ಥಾಪಿಸಲು ನೆರವಾಗಬೇಕು.

ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರ ಭದ್ರತೆ ಖಚಿತಪಡಿಸಬೇಕು ಎಂದು ಉಡುಪಿ ಮೊಬೈಲ್ ರಿಟೈಲ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ವಿವೇಕ ಜಿ ಸುವರ್ಣ ಆಗ್ರಹಿಸಿದ್ದಾರೆ..

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago