ಉಡುಪಿ : ಬೆಡ್ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ.
ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು, ಅವರ ತಾಯಿ ಉಡುಪಿಯ ಅಂಬಲಪಾಡಿ ಕಾರ್ತೀಕ್ ಹೋಟೆಲ್ ಎದುರು ಇರುವ ಶ್ಯಾಂ ಸದನದಲ್ಲಿ ವಿನೋದಿನಿ(82) ಎಂಬವರು ಒಂಟಿಯಾಗಿ ವಾಸ ಮಾಡಿಕೊಂಡಿದ್ದು, ಅಪರಿಚಿತ ವ್ಯಕ್ತಿಯು ಬೆಡ್ ಶೀಟನ್ನು ಮಾರುವ ನೆಪದಲ್ಲಿ ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ ವಿನೋದಿನಿರವರಿಗೆ ಬೆಡ್ ಶೀಟನ್ನು ತೆಗೆದುಕೊಳ್ಳು ವಂತೆ ಒತ್ತಾಯಿಸುತ್ತಿದ್ದನು.
ಇದನ್ನು ಗಮನಿಸಿದ ಮನೆಯ ಕೇರ್ ಟೇಕರ್ ಪ್ಲಂಬಿಂಗ್ ಕೆಲಸಕ್ಕೆ ಬಂದಿದ್ದ ಪ್ರಶಾಂತ್ರನ್ನು ಕರೆದಿದ್ದು, ವಾಪಸ್ಸು ಬರುವಷ್ಟರಲ್ಲಿ ಅಪರಿಚಿತ ವ್ಯಕ್ತಿ ಮನೆಯಿಂದ ಪರಾರಿಯಾಗಿ ಕಾರಿನಲ್ಲಿ ವೇಗವಾಗಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…