Featured

ಉಡುಪಿ: ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಪ್ರಿಯಾಂಕ ಗಾಂಧಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನ : ವೆರೋನಿಕಾ ಕರ್ನೆಲಿಯೋ – Vishwanews24

ಉಡುಪಿ: ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಪ್ರಿಯಾಂಕ ಗಾಂಧಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನ : ವೆರೋನಿಕಾ ಕರ್ನೆಲಿಯೋ

ಉಡುಪಿ: ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಠದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗ್ರಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂತೋಷದಿಂದ ಸ್ವಾಗತಿಸುತ್ತೇವೆ . ಬಿಜೆಪಿ ಸರ್ಕಾರದ ಆಡಳಿತದಿಂದ ಜನರ ಜನಜೀವನ ತೀರ ಸಂಕಷ್ಟದಲ್ಲಿದೆ. ದಿನನಿತ್ಯದ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ತಲುಪುತ್ತಿದೆ. ಗ್ಯಾಸ್ ಸಿಲಿಂಡರ್ ನ ಬೆಲೆ ಗಗನಕ್ಕೆ ಏರಿದೆ. ನಮ್ಮ ಯುವಕ ಯುವತಿಯರು ಯಾವುದೇ ಉದ್ಯೋಗಗಳು ದೊರಕದೆ ನಿರುದ್ಯೋಗಿಗಳಾಗಿದ್ದಾರೆ. ನೋಟ್ ಬ್ಯಾನ್ ಜಿ ಎಸ್‌ಟಿ ಇಂತಹ ಅನೇಕ ಜನವಿರೋಧಿ ಕಾರ್ಯಕ್ರಮಗಳ ಮೂಲಕ ಜನರ ಬಡಸ್ತಿಕೆ ದಿನದಿಂದ ದಿನಕ್ಕೆ ಏರುತ್ತಾ ಇದೆ. ಇಂತಹ ಸಂಕಷ್ಟದ ಕಾಲಘಟ್ಟದಲ್ಲಿ ಕುಟುಂಬವನ್ನು ನಡೆಸುವುದು ಎಲ್ಲರಿಗೂ ಕಷ್ಟಕರವಾದ ಒಂದು ಪರಿಸ್ಥಿತಿ ನಿರ್ಮಾಣವಾಗಿದೆ . ಈ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿಯವರು ಪ್ರತಿ ಮನೆಯ ಮಹಿಳಾ ಯಜಮಾನಿಗೆ ಮಾಸಿಕ 2,000 ಗ್ರಹಲಕ್ಷ್ಮಿ ಯೋಜನೆಯನ್ನು ನಾ ನಾಯಕಿ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಈ ಯೋಜನೆ ಕಾರ್ಯಗೊಳ್ಳಲಿದೆ . ಇದರ ಜೊತೆ ನಮ್ಮೆಲ್ಲರ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯರವರು ಮತ್ತು ಕಾಂಗ್ರೆಸಿನ ಎಲ್ಲ ನಾಯಕರು ಜೊತೆ ಸೇರಿಕೊಂಡು ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ಉಚಿತ ಕೊಡುವಂತಹ ಒಂದು ಮಹತ್ತರವಾದ ಯೋಜನೆಯನ್ನು ಕೂಡ ರೂಪಿಸಿದ್ದಾರೆ. ಈ ಎರಡು ಯೋಜನೆಗಳು ನಮ್ಮ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತುಂಬಾ ಪ್ರಯೋಜನವಾಗಲಿವೆ.

ಈ ಯೋಜನೆಯನ್ನು ಘೋಷಿಸಿದ ನಮ್ಮ ಪಕ್ಷದ ನಾಯಕರಿಗೆ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಸಮಸ್ತ ಜನತೆಯ ಪರವಾಗಿ ಕೃತಜ್ಞತೆಗಳು ಸಲ್ಲಿಸುತ್ತಿದ್ದೇನೆ. ಈ ಕಾರ್ಯಕ್ರಮಗಳು ಸಾಕಾರಗೊಳ್ಳಬೇಕಿದ್ದರೆ ನಾವೆಲ್ಲರೂ ಕೂಡ ಒಂದು ಶಕ್ತಿಯಾಗಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ . ಈ ನಿಟ್ಟಿನಲ್ಲಿ ಮುಂದಿನ ಅವಧಿಗೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಸರ್ಕಾರ ಆಗಿ ರೂಪುಗೊಳ್ಳಲಿದೆ ಎಂಬುದಾಗಿ ಕರ್ನೆಲಿಯೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago