Featured

ಉಡುಪಿ:  ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ :  ರಮೇಶ್ ಕಾಂಚನ್ ಆಗ್ರಹ – vishwanews24

ಕಾಂಗ್ರೆಸ್  ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಅವರ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ : ರಮೇಶ್ ಕಾಂಚನ್

ಉಡುಪಿ: ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಗಗನಕ್ಕೇರಿದ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಇಳಿಸದೆ ಜನರನ್ನು ವಂಚಿಸುತ್ತಿದ್ದೆ‌. ಇಂಧನಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹಲವಾರು ವಸ್ತುಗಳ ಬೆಲೆ ಏರಿಕೆಯಾಗಿದೆ.

ಗ್ಯಾಸ್ ಸಿಲಿಂಡರ್ ದರ ಹೆಚ್ಚಳ,ಟೋಲ್ ದರ ಏರಿಕೆ, ಆರೋಗ್ಯ ವಿಮೆ ಮೇಲೆ ಶೇಕಡಾ 18 ಜಿ.ಎಸ್.ಟಿ, ಜೀವವಿಮೆಯ ಮೇಲೂ ಜಿ.ಎಸ್.ಟಿ ಹೇರಿಕೆ, ಅಗತ್ಯದ ಔಷಧಿ, ಬ್ಯಾಂಕ್ ಸೇವಾ ಶುಲ್ಕ, ತರಕಾರಿ ಬೇಳೆಕಾಳುಗಳು ಹಾಗೂ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನರು ಕಂಗಾಲಾಗಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಳಪೆ ಅರ್ಥಿಕ ನೀತಿಯಿಂದಾಗಿ ಹಣದುಬ್ಬರವೂ ಗಣನೀಯವಾಗಿ ಏರಿಕೆಯಾಗಿದೆ. ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಹಂಚಿಕೆಯಲ್ಲೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಅನ್ಯಾಯವೆಸುಗುತ್ತಿದ್ದೆ.

ಈ ಹಿಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರ ಸಮಸ್ಯೆಯ ಪರಿಹಾರಕ್ಕಾಗಿ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳನ್ನು ಘೋಷಿಸಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ಬಂದ ದಿನದಿಂದ ಇಂದಿನವರೆಗೂ ಆ ಪಂಚ ಗ್ಯಾರಂಟಿಗಳನ್ನು ಯಥಾವತ್ತಾಗಿ ರಾಜ್ಯದ ಜನರಿಗೆ ನೀಡುವ ಮೂಲಕ ಅವರು ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿಯವರು ತಮ್ಮ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ಎಂಬುದನ್ನು ಅರ್ಥೈಸಿಕೊಂಡು ತಮ್ಮ ಜನಾಕ್ರೋಶ ಯಾತ್ರೆಯನ್ನು ಕೇಂದ್ರ ಸರ್ಕಾರದ ವಿರುದ್ಧವೇ ನಡೆಸುವಂತೆ ರಮೇಶ್ ಕಾಂಚನ್ ಒತ್ತಾಯಿಸಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago