Featured

ಉಡುಪಿ:  ಬೇನಾಮಿ ಆಸ್ತಿ ಆರೋಪ :  ಕಾರ್ಕಳ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್ – Vishwanews24

ಉಡುಪಿ:  ಬೇನಾಮಿ ಆಸ್ತಿ ಆರೋಪ :  ಕಾರ್ಕಳ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್

ಉಡುಪಿ: ಕಾರ್ಕಳದ ಸಚಿವ ವಿ. ಸುನಿಲ್ ಕುಮಾರ್  ವಿರುದ್ಧ ಶ್ರೀರಾಮಸೇನೆ  ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಬೇನಾಮಿ ಆಸ್ತಿ ಆರೋಪ ಮಾಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ರೆ.

ಚುನಾವಣೆ ಘೋಷಣೆ ಆಗುವ ಮೊದಲೇ ಕಾರ್ಕಳದಲ್ಲಿ ಮುತಾಲಿಕ್ ಮತ್ತು ಸುನಿಲ್ ಕುಮಾರ್ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ. ಎರಡು ತಿಂಗಳಿನಿಂದ ಮುತಾಲಿಕ್ ನಿರಂತರವಾಗಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಕಲಿ ಹಿಂದುತ್ವ, ಭ್ರಷ್ಟಾಚಾರ ಅಂತಾ ಆರೋಪಿಸುತ್ತಿದ್ದವರು ಇದೀಗ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ.

ಉಡುಪಿ  ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 ಎಕರೆ ಕೃಷಿ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದಾರೆ. ಮುಂದೆ ಅದು ಕೈಗಾರಿಕಾ ಪ್ರದೇಶವಾಗಿ ಭೂ ಪರಿವರ್ತನೆ ಮಾಡಿ 4-5 ಪಟ್ಟು ಹೆಚ್ಚಿನ ಬೆಲೆಗೆ ಸರ್ಕಾರ ಖರೀದಿ ಮಾಡುತ್ತದೆ. 4 ಚಿಲ್ಲರೆ ಕೋಟಿಗೆ ಖರೀದಿಸುವ ಮೂಲಕ ಜಮೀನು ಹೊಂದಿರುವ ಬಡ ರೈತರಿಗೂ ಅನ್ಯಾಯ ಆಗಿದೆ. ಇದರಲ್ಲಿ ಶಾಸಕ, ರಾಜ್ಯದ ಪ್ರಭಾವಿ ಮಂತ್ರಿಗಳ ಕೈವಾಡ ಇದೆ ಎಂದು ಮುತಾಲಿಕ್ ಆರೋಪ ಮಾಡಿದ್ದಾರೆ.

ವಿದ್ಯಾ ಸುವರ್ಣ- ಗಜಾನಂದ ದಂಪತಿ ಕಾರ್ಕಳದ ಬಿಜೆಪಿಯ ಕಾರ್ಯಕರ್ತರು. ಹೆಬ್ರಿ ತಾಲೂಕಿನಲ್ಲಿ ಕಡಿಮೆ ಹಣ ಕೊಟ್ಟು ರೈತರ ಕೃಷಿ ಭೂಮಿಯನ್ನು ಈ ಇಬ್ಬರು ಖರೀದಿ ಮಾಡಿದ್ದಾರೆ. ಸ್ಥಳೀಯ ಶಾಸಕ ಪ್ರಭಾವಿ ಮಂತ್ರಿ ಈ ಅವ್ಯವಹಾರದ ಹಿಂದೆ ಇದ್ದಾರೆ ಎಂದು ಸುನಿಲ್ ಕುಮಾರ್ ಹೆಸರು ಹೇಳದೇ ಆರೋಪಿಸಿದ್ದಾರೆ. ಆದರೆ ದೂರಿನಲ್ಲಿ ಸಚಿವರ ಹೆಸರು ಉಲ್ಲೇಖಿಸಿದ್ದಾರೆ.

ಜಿಲ್ಲಾಧಿಕಾರಿ ಕೂರ್ಮರಾವ್ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ ಮತದಾರರು ಒಂದು ವಾರದ ಒಳಗೆ ಈ ಬಗ್ಗೆ ತನಿಖೆ ನಡೆಸಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

38 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

1 hour ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago