ಉಡುಪಿ : ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.
ಇವರು ತನ್ನ ಬೈಕಿನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಬಸ್, ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದರೆನ್ನಲಾಗಿದೆ. ಬಸ್, ಬೈಕ್ನ್ನು ಸುಮಾರು 50 ಅಡಿ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ನಿಂತಿತು. ಅಪಘಾತದಿಂದ ಗಂಭೀರ ವಾಗಿ ಗಾಯಗೊಂಡಿದ್ದ ಪವನ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…