ಉಡುಪಿ : ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.
ಇವರು ತನ್ನ ಬೈಕಿನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಬಸ್, ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದರೆನ್ನಲಾಗಿದೆ. ಬಸ್, ಬೈಕ್ನ್ನು ಸುಮಾರು 50 ಅಡಿ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ನಿಂತಿತು. ಅಪಘಾತದಿಂದ ಗಂಭೀರ ವಾಗಿ ಗಾಯಗೊಂಡಿದ್ದ ಪವನ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…