ಉಡುಪಿ: ಸುಮಾರು 300 ವರ್ಷಗಳ ಇತಿಹಾಸವಿರುವ ಬೈಲೂರು ಮಹಿಷ ಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಮೂಲ ಮೈಸಂದಾಯ, ಧೂಮವತಿ ಬಂಟ ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಮಹಾ ಅನ್ನಸಂತರ್ಪಣೆ ನೇಮೋತ್ಸವ ಹಾಗೂ ತಂಬಿಲ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.
ಮಾರ್ಚ್ 15ರಿಂದ ಆರಂಭಗೊಳ್ಳಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಬ್ರಹ್ಮ ಕಳಶೋತ್ಸವದ ಅಂಗವಾಗಿ ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿಯನ್ನ ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಿದರು.
ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಐದು ಗ್ರಾಮಗಳಿಗೆ ಸಂಬಂಧಪಟ್ಟ ದೈವವೂ ಇದಾಗಿದ್ದು ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ನಿಕಟ ಸಂಬಂಧ ಹೊಂದಿದೆ ಎಂದು ಐತಿಹಾಸ ಪುರಾಣವಿದೆ.
ಕೇರಳದ ಖ್ಯಾತ ಜ್ಯೋತಿಷ್ಯ ವಾಚಸ್ಪತಿ ಪೊದುವಾಲ್ ಮಾಧವನ್ ಅವರ ಪ್ರಶ್ನಾ ಚಿಂತನೆಯಲ್ಲಿ ಈ ದೈವಸ್ಥಾನದ ಜೀರ್ಣೋದ್ಧಾರ ಅಗತ್ಯವಾಗಿ ಮಾಡಬೇಕಾಗಿದೆ ಎಂಬ ವಿಚಾರ ಬಂದಾಗ ಗ್ರಾಮಸ್ಥರೆಲ್ಲರೂ ಸೇರಿ ದೈವಸ್ಥಾನದ ಜೀರ್ಣೋದರಕ್ಕೆ ಮುಂದಾಗಿದ್ದು ಊರ ಪರ ಊರ ಭಕ್ತ ಸಹಕಾರದಿಂದ ಈ ದೈವಸ್ಥಾನ ನಿರ್ಮಾಣಗೊಳ್ಳುತ್ತಿದೆ ಎಂದು ಮಟ್ಟಾರು ರತ್ನಾಕರ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಯಶ್ ಪಾಲ್ ಸುವರ್ಣ ನವೀನ್ ಭಂಡಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ್ ಶೆಟ್ಟಿ , ಜಯರಾಮ ಆಚಾರ್ಯ , ಮೋಹನ ಮುದ್ದನ್ನ ಶೆಟ್ಟಿ ದಿನೇಶ್ ಶೆಟ್ಟಿ, ನಾರಾಯಣ ಉಡುಪ , ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…