ಉಡುಪಿ: ಸುಮಾರು 300 ವರ್ಷಗಳ ಇತಿಹಾಸವಿರುವ ಬೈಲೂರು ಮಹಿಷ ಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಮೂಲ ಮೈಸಂದಾಯ, ಧೂಮವತಿ ಬಂಟ ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಮಹಾ ಅನ್ನಸಂತರ್ಪಣೆ ನೇಮೋತ್ಸವ ಹಾಗೂ ತಂಬಿಲ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.
ಮಾರ್ಚ್ 15ರಿಂದ ಆರಂಭಗೊಳ್ಳಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಬ್ರಹ್ಮ ಕಳಶೋತ್ಸವದ ಅಂಗವಾಗಿ ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿಯನ್ನ ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಿದರು.
ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಐದು ಗ್ರಾಮಗಳಿಗೆ ಸಂಬಂಧಪಟ್ಟ ದೈವವೂ ಇದಾಗಿದ್ದು ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ನಿಕಟ ಸಂಬಂಧ ಹೊಂದಿದೆ ಎಂದು ಐತಿಹಾಸ ಪುರಾಣವಿದೆ.
ಕೇರಳದ ಖ್ಯಾತ ಜ್ಯೋತಿಷ್ಯ ವಾಚಸ್ಪತಿ ಪೊದುವಾಲ್ ಮಾಧವನ್ ಅವರ ಪ್ರಶ್ನಾ ಚಿಂತನೆಯಲ್ಲಿ ಈ ದೈವಸ್ಥಾನದ ಜೀರ್ಣೋದ್ಧಾರ ಅಗತ್ಯವಾಗಿ ಮಾಡಬೇಕಾಗಿದೆ ಎಂಬ ವಿಚಾರ ಬಂದಾಗ ಗ್ರಾಮಸ್ಥರೆಲ್ಲರೂ ಸೇರಿ ದೈವಸ್ಥಾನದ ಜೀರ್ಣೋದರಕ್ಕೆ ಮುಂದಾಗಿದ್ದು ಊರ ಪರ ಊರ ಭಕ್ತ ಸಹಕಾರದಿಂದ ಈ ದೈವಸ್ಥಾನ ನಿರ್ಮಾಣಗೊಳ್ಳುತ್ತಿದೆ ಎಂದು ಮಟ್ಟಾರು ರತ್ನಾಕರ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಯಶ್ ಪಾಲ್ ಸುವರ್ಣ ನವೀನ್ ಭಂಡಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ್ ಶೆಟ್ಟಿ , ಜಯರಾಮ ಆಚಾರ್ಯ , ಮೋಹನ ಮುದ್ದನ್ನ ಶೆಟ್ಟಿ ದಿನೇಶ್ ಶೆಟ್ಟಿ, ನಾರಾಯಣ ಉಡುಪ , ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…