Featured

ಉಡುಪಿ : ಬೈಲೂರು ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಿಸಿದ ದೈವಗಳಿಗೆ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ-ಬ್ರಹ್ಮಕಲಶ-ನೇಮ-ತಂಬಿಲ : ಆಮಂತ್ರಣ ಪತ್ರಿಕೆ ಬಿಡುಗಡೆ – Vishwanews24

ಉಡುಪಿ : ಬೈಲೂರು ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಿಸಿದ ದೈವಗಳಿಗೆ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ-ಬ್ರಹ್ಮಕಲಶ-ನೇಮ-ತಂಬಿಲ : ಆಮಂತ್ರಣ ಪತ್ರಿಕೆ ಬಿಡುಗಡೆ

300 ವರ್ಷದ ಇತಿಹಾಸ ಇರುವ ದೈವಗಳಿಗೆ ಪ್ರತಿಷ್ಠೆ- ಬ್ರಹ್ಮ ಕಲಶೋತ್ಸವ-ನೇಮೋತ್ಸವ

ಉಡುಪಿ: ಸುಮಾರು 300 ವರ್ಷಗಳ ಇತಿಹಾಸವಿರುವ ಬೈಲೂರು ಮಹಿಷ ಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಮೂಲ ಮೈಸಂದಾಯ, ಧೂಮವತಿ ಬಂಟ ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಮಹಾ ಅನ್ನಸಂತರ್ಪಣೆ ನೇಮೋತ್ಸವ ಹಾಗೂ ತಂಬಿಲ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಮಾರ್ಚ್ 15ರಿಂದ ಆರಂಭಗೊಳ್ಳಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಬ್ರಹ್ಮ ಕಳಶೋತ್ಸವದ ಅಂಗವಾಗಿ ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿಯನ್ನ ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಿದರು.

ಕಡಿಯಾಳಿ ಮಹಿಷ ಮರ್ದಿನಿ ದೇಗುಲದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ದೈವಸ್ಥಾನದ ನೂತನ ಶಿಲಾಮಯ ದೇಗುಲದ ಬಗ್ಗೆ ಶುಭನುಡಿಗಳನ್ನು ನುಡಿದರು.

ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಐದು ಗ್ರಾಮಗಳಿಗೆ ಸಂಬಂಧಪಟ್ಟ ದೈವವೂ ಇದಾಗಿದ್ದು ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ನಿಕಟ ಸಂಬಂಧ ಹೊಂದಿದೆ ಎಂದು ಐತಿಹಾಸ ಪುರಾಣವಿದೆ.

ಕೇರಳದ ಖ್ಯಾತ ಜ್ಯೋತಿಷ್ಯ ವಾಚಸ್ಪತಿ ಪೊದುವಾಲ್ ಮಾಧವನ್ ಅವರ ಪ್ರಶ್ನಾ ಚಿಂತನೆಯಲ್ಲಿ ಈ ದೈವಸ್ಥಾನದ ಜೀರ್ಣೋದ್ಧಾರ ಅಗತ್ಯವಾಗಿ ಮಾಡಬೇಕಾಗಿದೆ ಎಂಬ ವಿಚಾರ ಬಂದಾಗ ಗ್ರಾಮಸ್ಥರೆಲ್ಲರೂ ಸೇರಿ ದೈವಸ್ಥಾನದ ಜೀರ್ಣೋದರಕ್ಕೆ ಮುಂದಾಗಿದ್ದು ಊರ ಪರ ಊರ ಭಕ್ತ ಸಹಕಾರದಿಂದ ಈ ದೈವಸ್ಥಾನ ನಿರ್ಮಾಣಗೊಳ್ಳುತ್ತಿದೆ ಎಂದು ಮಟ್ಟಾರು ರತ್ನಾಕರ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಯಶ್ ಪಾಲ್ ಸುವರ್ಣ ನವೀನ್ ಭಂಡಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ್ ಶೆಟ್ಟಿ , ಜಯರಾಮ ಆಚಾರ್ಯ , ಮೋಹನ ಮುದ್ದನ್ನ ಶೆಟ್ಟಿ ದಿನೇಶ್ ಶೆಟ್ಟಿ, ನಾರಾಯಣ ಉಡುಪ , ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

13 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

13 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

17 hours ago