Featured

ಉಡುಪಿ : ಬೈಲೂರು ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಿಸಿದ ದೈವಗಳಿಗೆ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ-ಬ್ರಹ್ಮಕಲಶ-ನೇಮ-ತಂಬಿಲ : ಆಮಂತ್ರಣ ಪತ್ರಿಕೆ ಬಿಡುಗಡೆ – Vishwanews24

ಉಡುಪಿ : ಬೈಲೂರು ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಿಸಿದ ದೈವಗಳಿಗೆ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ-ಬ್ರಹ್ಮಕಲಶ-ನೇಮ-ತಂಬಿಲ : ಆಮಂತ್ರಣ ಪತ್ರಿಕೆ ಬಿಡುಗಡೆ

300 ವರ್ಷದ ಇತಿಹಾಸ ಇರುವ ದೈವಗಳಿಗೆ ಪ್ರತಿಷ್ಠೆ- ಬ್ರಹ್ಮ ಕಲಶೋತ್ಸವ-ನೇಮೋತ್ಸವ

ಉಡುಪಿ: ಸುಮಾರು 300 ವರ್ಷಗಳ ಇತಿಹಾಸವಿರುವ ಬೈಲೂರು ಮಹಿಷ ಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಮೂಲ ಮೈಸಂದಾಯ, ಧೂಮವತಿ ಬಂಟ ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಮಹಾ ಅನ್ನಸಂತರ್ಪಣೆ ನೇಮೋತ್ಸವ ಹಾಗೂ ತಂಬಿಲ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಮಾರ್ಚ್ 15ರಿಂದ ಆರಂಭಗೊಳ್ಳಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಬ್ರಹ್ಮ ಕಳಶೋತ್ಸವದ ಅಂಗವಾಗಿ ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿಯನ್ನ ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಿದರು.

ಕಡಿಯಾಳಿ ಮಹಿಷ ಮರ್ದಿನಿ ದೇಗುಲದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ದೈವಸ್ಥಾನದ ನೂತನ ಶಿಲಾಮಯ ದೇಗುಲದ ಬಗ್ಗೆ ಶುಭನುಡಿಗಳನ್ನು ನುಡಿದರು.

ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಐದು ಗ್ರಾಮಗಳಿಗೆ ಸಂಬಂಧಪಟ್ಟ ದೈವವೂ ಇದಾಗಿದ್ದು ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ನಿಕಟ ಸಂಬಂಧ ಹೊಂದಿದೆ ಎಂದು ಐತಿಹಾಸ ಪುರಾಣವಿದೆ.

ಕೇರಳದ ಖ್ಯಾತ ಜ್ಯೋತಿಷ್ಯ ವಾಚಸ್ಪತಿ ಪೊದುವಾಲ್ ಮಾಧವನ್ ಅವರ ಪ್ರಶ್ನಾ ಚಿಂತನೆಯಲ್ಲಿ ಈ ದೈವಸ್ಥಾನದ ಜೀರ್ಣೋದ್ಧಾರ ಅಗತ್ಯವಾಗಿ ಮಾಡಬೇಕಾಗಿದೆ ಎಂಬ ವಿಚಾರ ಬಂದಾಗ ಗ್ರಾಮಸ್ಥರೆಲ್ಲರೂ ಸೇರಿ ದೈವಸ್ಥಾನದ ಜೀರ್ಣೋದರಕ್ಕೆ ಮುಂದಾಗಿದ್ದು ಊರ ಪರ ಊರ ಭಕ್ತ ಸಹಕಾರದಿಂದ ಈ ದೈವಸ್ಥಾನ ನಿರ್ಮಾಣಗೊಳ್ಳುತ್ತಿದೆ ಎಂದು ಮಟ್ಟಾರು ರತ್ನಾಕರ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಯಶ್ ಪಾಲ್ ಸುವರ್ಣ ನವೀನ್ ಭಂಡಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ್ ಶೆಟ್ಟಿ , ಜಯರಾಮ ಆಚಾರ್ಯ , ಮೋಹನ ಮುದ್ದನ್ನ ಶೆಟ್ಟಿ ದಿನೇಶ್ ಶೆಟ್ಟಿ, ನಾರಾಯಣ ಉಡುಪ , ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago