Featured

ಉಡುಪಿ: ಬೋಟ್‌ನಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು 14 ಗಂಟೆ ನೀರಿನಲ್ಲಿದ್ದ  ವ್ಯಕ್ತಿಯ ರಕ್ಷಣೆ – Vishwanews24

ಉಡುಪಿ: ಬೋಟ್‌ನಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು 14 ಗಂಟೆ ನೀರಿನಲ್ಲಿದ್ದ  ವ್ಯಕ್ತಿಯ ರಕ್ಷಣೆ

ಉಡುಪಿ: ಪರ್ಸಿನ್‌ ಬೋಟ್‌ನಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರ 14 ಗಂಟೆಗಳ ಕಾಲ ನೀರಿನಲ್ಲಿದ್ದು, ಬಳಿಕ ರಕ್ಷಣೆಗೊಳಗಾದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಪುಕಾಲು ಕಮೇಯ (32) ರಕ್ಷಣೆಗೊಳಗಾದವರು.

ಘಟನೆ ವಿವರ: ಸುಮಾರು 35 ಮಂದಿ ಮೀನುಗಾರರ ತಂಡ ಪರ್ಸಿನ್‌ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿ ಹಿಂತಿರುಗುತ್ತಿದ್ದಾಗ ಹಿಂದುಗಡೆ ಇದ್ದ ಪುಕಾಲು ಕಮೇಯ ಆಕಸ್ಮಿಕವಾಗಿ ಕಡಲಿಗೆ ಬಿದ್ದರು. ಈ ವಿಚಾರ ಸ್ವಲ್ಪ ದೂರು ಕ್ರಮಿಸಿದ ಬಳಿಕ ಇತರ ಮೀನುಗಾರರಿಗೆ ತಿಳಿಯಿತು. ಕೂಡಲೇ ಹಿಂದಕ್ಕೆ ತೆರಳಿ ಹುಡುಕಾಟ ನಡೆಸಿದರೂ ಯಾವುದೇ ಉಪಯೋಗವಾಗಲಿಲ್ಲ.

ಬಳಿಕ ಮೀನುಗಾರರು ಜೀವರಕ್ಷಕರಿಗೆ ಮಾಹಿತಿ ನೀಡಿದರು. ನೀರಿಗೆ ಬಿದ್ದ ವ್ಯಕ್ತಿ ಸ್ವಲ್ಪ ಸಮಯ ಈಜಾಡಿದಾಗ ಅಂಜಲ್‌ ಮೀನಿಗೆ ಹಾಕಿದ್ದ ಬೀಡಿನ ಬಲೆ ಕಂಡುಬಂತು. ಅದರಲ್ಲಿ ಅಳವಡಿಸಿದ್ದ ಬಾವುಟವನ್ನು ಹಿಡಿದು ಬಲೆಯನ್ನೇ ಆಸ‌ರೆಯಾಗಿಸಿಕೊಂಡು ಅಲ್ಲಿಯೇ ನಿಂತುಕೊಂಡರು. ಆ ಬಲೆಯನ್ನು ಎ. 17ರಂದು ಸಂಜೆ 6ರ ಸುಮಾರಿಗೆ ಹಾಕಿದ್ದು, ಬೆಳಗ್ಗೆ 3 ಗಂಟೆಗೆ ತೆಗೆಯುತ್ತಾ ಬರುವಾಗ ಕೊನೆಯಲ್ಲಿ ನಿಂತಿದ್ದ ಇವರು ಕಂಡುಬಂದರು. ತತ್‌ಕ್ಷಣ ನೀರಿನಿಂದ ಮೇಲೆತ್ತಿ ರಕ್ಷಿಸಿ ದಡಕ್ಕೆ ತರಲಾಯಿತು. ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಆಪತಾºಂಧವ ಈಶ್ವರ ಮಲ್ಪೆ ಅವರು ದಾಖಲಿಸಿದರು. ಈಗ ಚೇತರಿಸಿಕೊಂಡಿದ್ದು,ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 5 ವರ್ಷಗಳಿಂದ ಮಲ್ಪೆಯಲ್ಲಿ ಬೋಟ್‌ನ ನಿರ್ವಹಣೆ ಸಹಿತ ವಿವಿಧ ಕೆಲಸ ಮಾಡಿಕೊಂಡಿದ್ದೇನೆ. ನಾನು ನೀರಿಗೆ ಬಿದ್ದ ಬಳಿಕ ಬೋಟ್‌ ಮರಳಿ ಬಂತು. ನಾನು ಸಂಜ್ಞೆ ಮಾಡಿದೆ. ಆದರೆ ಅವರಿಗೆ ತಿಳಿಯಲಿಲ್ಲ. ಬಳಿಕ ಸಮುದ್ರದಲ್ಲಿ ಲಭಿಸಿದ್ದ ಕೆಲವು ಪ್ಲಾಸ್ಟಿಕ್‌ ಬಾಟಲಿಗಳನ್ನು ಹೊಟ್ಟೆಯ ಅಡಿಗೆ ಇರಿಸಿಕೊಂಡು ಮೀನಿಗೆ ಹಾಕಲಾಗಿದ್ದ ಬಲೆಯ ಆಶ್ರಯ ಪಡೆದು ಜೀವ ರಕ್ಷಿಸಿಕೊಂಡೆ.
– ಪುಕಾಲು ಕಮೇಯ, ಮೀನುಗಾರ

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

8 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

8 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

9 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

24 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 day ago