Featured

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

ಉಡುಪಿ, : ಕೇಂದ್ರ ಸರಕಾರ ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವ ಕ್ರಮವನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಒಕ್ಕೂಟ (ಎಐಎನ್‌ಬಿಓಎಫ್) ಮಾ.15 ಮತ್ತು 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಉಡುಪಿಯ ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಮಾರಿಯಾ ಮಥಾಯಸ್ ತಿಳಿಸಿದ್ದಾರೆ.

ಉಡುಪಿಯಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.15ರ ಬೆಳಗ್ಗೆ 10 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆ ಎದುರು ಬ್ಯಾಂಕ್ ನೌಕರರ ಬೃಹತ್ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಈ ಎರಡು ದಿನಗಳಂದು ದೇಶಾದ್ಯಂತ ಯಾವುದೇ ಸಾರ್ವಜನಿಕ ರಂಗದ ಯಾವುದೇ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುವುದಿಲ್ಲ ಎಂದವರು ತಿಳಿಸಿದರು.

ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

ಇದರಿಂದ ಸತತ ನಾಲ್ಕು ದಿನಗಳ ಕಾಲ (ಮಾ.13ರಿಂದ 16ರವರೆಗೆ) ಬ್ಯಾಂಕ್ ಸೇವೆ ಗ್ರಾಹಕರಿಗೆ ಸಿಗುವುದಿಲ್ಲ ಎಂದರು. ಕೇಂದ್ರ ಸರಕಾರ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಿಸಲು ಮುಂದಾಗಿದ್ದು, ಇದನ್ನು ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ವಿರೋಧಿ ಸುತ್ತದೆ. ಇದರೊಂದಿಗೆ ತನ್ನ ಸದಸ್ಯರು ಹಾಗೂ ನಿವೃತ್ತರ ಅನುಕೂಲಕ್ಕಾಗಿ ಇತರ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆಯೂ ಒತ್ತಾಯಿಸಲಿದೆ ಎಂದರು.

ಬ್ಯಾಂಕ್ ಖಾಸಗೀಕರಣ ಪ್ರಮುಖವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರಲಿದೆ. ಸೇವಾಶುಲ್ಕ ಹೆಚ್ಚಲಿದ್ದು, ಅದನ್ನು ಭರಿಸಬಲ್ಲ ಗ್ರಾಹಕ ರಿಗೆ ಮಾತ್ರ ಸೇವೆ ದೊರೆಯಲಿದೆ. ಈ ಮೂಲಕ ಬ್ಯಾಂಕ್ ರಾಷ್ಟ್ರೀಕರಣದ ಪ್ರಮುಖ ಉದ್ದೇಶವನ್ನು ಕೈಬಿಟ್ಟಂತಾಗುತ್ತದೆ ಎಂದರು.

ಉಡುಪಿ : ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು -Vishwanews24

ಒಕ್ಕೂಟ ಮುಂದಿನ ದಿನಗಳಲ್ಲಿ ಖಾಸಗೀಕರಣದ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಮೂಡಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ಇದಕ್ಕಾಗಿ ಸಭೆ, ಗ್ರಾಹಕರ ಸಭೆ, ಪ್ರದರ್ಶನ ನಡೆಸಲಿದೆ. ಬ್ಯಾನರ್ ಪ್ರದರ್ಶನ, ಕರಪತ್ರಗಳ ವಿತರಣೆ, ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಲಿದೆ ಎಂದು ಮಾರಿಯಾ ಮಥಾಯಸ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಸಚಿನ್ ಶೆಟ್ಟಿ, ಲೋಕೇಶ್, ನರಸಿಂಹ ಮೂರ್ತಿ ಉಪಸ್ಥಿತರಿದ್ದರು.

ಉಡುಪಿ : ಯುವ ಪರಿವರ್ತಕರ ಹುದ್ದೆ : ಅರ್ಜಿ ಆಹ್ವಾನ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago