ಉಡುಪಿ, : ಕೇಂದ್ರ ಸರಕಾರ ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವ ಕ್ರಮವನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಒಕ್ಕೂಟ (ಎಐಎನ್ಬಿಓಎಫ್) ಮಾ.15 ಮತ್ತು 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಉಡುಪಿಯ ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಮಾರಿಯಾ ಮಥಾಯಸ್ ತಿಳಿಸಿದ್ದಾರೆ.
ಉಡುಪಿಯಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.15ರ ಬೆಳಗ್ಗೆ 10 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆ ಎದುರು ಬ್ಯಾಂಕ್ ನೌಕರರ ಬೃಹತ್ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಈ ಎರಡು ದಿನಗಳಂದು ದೇಶಾದ್ಯಂತ ಯಾವುದೇ ಸಾರ್ವಜನಿಕ ರಂಗದ ಯಾವುದೇ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುವುದಿಲ್ಲ ಎಂದವರು ತಿಳಿಸಿದರು.
ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24
ಇದರಿಂದ ಸತತ ನಾಲ್ಕು ದಿನಗಳ ಕಾಲ (ಮಾ.13ರಿಂದ 16ರವರೆಗೆ) ಬ್ಯಾಂಕ್ ಸೇವೆ ಗ್ರಾಹಕರಿಗೆ ಸಿಗುವುದಿಲ್ಲ ಎಂದರು. ಕೇಂದ್ರ ಸರಕಾರ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಿಸಲು ಮುಂದಾಗಿದ್ದು, ಇದನ್ನು ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ವಿರೋಧಿ ಸುತ್ತದೆ. ಇದರೊಂದಿಗೆ ತನ್ನ ಸದಸ್ಯರು ಹಾಗೂ ನಿವೃತ್ತರ ಅನುಕೂಲಕ್ಕಾಗಿ ಇತರ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆಯೂ ಒತ್ತಾಯಿಸಲಿದೆ ಎಂದರು.
ಬ್ಯಾಂಕ್ ಖಾಸಗೀಕರಣ ಪ್ರಮುಖವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರಲಿದೆ. ಸೇವಾಶುಲ್ಕ ಹೆಚ್ಚಲಿದ್ದು, ಅದನ್ನು ಭರಿಸಬಲ್ಲ ಗ್ರಾಹಕ ರಿಗೆ ಮಾತ್ರ ಸೇವೆ ದೊರೆಯಲಿದೆ. ಈ ಮೂಲಕ ಬ್ಯಾಂಕ್ ರಾಷ್ಟ್ರೀಕರಣದ ಪ್ರಮುಖ ಉದ್ದೇಶವನ್ನು ಕೈಬಿಟ್ಟಂತಾಗುತ್ತದೆ ಎಂದರು.
ಉಡುಪಿ : ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು -Vishwanews24
ಒಕ್ಕೂಟ ಮುಂದಿನ ದಿನಗಳಲ್ಲಿ ಖಾಸಗೀಕರಣದ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಮೂಡಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ಇದಕ್ಕಾಗಿ ಸಭೆ, ಗ್ರಾಹಕರ ಸಭೆ, ಪ್ರದರ್ಶನ ನಡೆಸಲಿದೆ. ಬ್ಯಾನರ್ ಪ್ರದರ್ಶನ, ಕರಪತ್ರಗಳ ವಿತರಣೆ, ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಲಿದೆ ಎಂದು ಮಾರಿಯಾ ಮಥಾಯಸ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಸಚಿನ್ ಶೆಟ್ಟಿ, ಲೋಕೇಶ್, ನರಸಿಂಹ ಮೂರ್ತಿ ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…