ಉಡುಪಿ: ಭಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ಆರಾಧಿಸುತ್ತದೆ.ಆದರೆ ಪಟೇಲ್ ಅವರು ಆರೆಸ್ಸೆಸ್ ನ್ನು ಬ್ಯಾನ್ ಮಾಡಿದ್ದರು.ಆದರೆ ಜವಾಹರಲಾಲ್ ನೆಹರೂ ಬ್ಯಾನ್ ವಾಪಾಸು ಪಡೆದರು. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯ ಕುರಿತು ಸ್ಪಷ್ಟ ತೀರ್ಪು ನೀಡಿದ್ದು. ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಬಗ್ಗೆ ಇಂದು ನಮ್ಮ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…