ಉಡುಪಿ: ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.1940 ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 1960 ದರ ನಿಗಧಿಪಡಿಸಿದ್ದು, ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭತ್ತ ಖರೀದಿ ಕೇಂದ್ರಗಳಿಗೆ ಗ್ರೇಡರ್ ಗಳನ್ನು ನೇಮಿಸುವಂತೆ ಮತ್ತು ಗೋದಾಮು ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಜಿಲ್ಲೆಯ 20 ಅಕ್ಕಿ ಮಿಲ್ಲುಗಳ ಮಾಲೀಕರು ಭತ್ತವನ್ನು ಹಲ್ಲಿಂಗ್ ಮಾಡಿಕೊಡಲು ಒಪ್ಪಿದ್ದು, ಜಿಲ್ಲೆಯ ರೈತರು ಬೆಳೆದ ಎಫ್.ಎ.ಕ್ಯೂ ಮಾದರಿಯ ಎಂಓ 04, ಜಯ,ಕಜೆ ಜಯ,ಜ್ಯೋತಿ ಬತ್ತದ ತಳಿಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಿ, ಸಾರ್ವಜನಿಕ ವಿತರಣಾ ಪದ್ದತಿಯಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಮತ್ತು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…