ಉಡುಪಿ: ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಭವಿಷ್ಯದ ಮೀನುಗಾರಿಕೆಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆಯ ಅನಿವಾರ್ಯತೆ ಹಾಗೂ ಸವಾಲುಗಳ ಬಗ್ಗೆ ಕರಾವಳಿ ಜಿಲ್ಲೆಯ ಮೀನುಗಾರರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಮೀನುಗಾರಿಕಾ ದೋಣಿ ಹಾಗೂ ಬೋಟ್ ಗಳು ಇಂಧನವಾಗಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಉತ್ಪನ್ನಗಳನ್ನು ಅವಲಂಬಿಸಿದ್ದು, ಸರಕಾರ ಹಂತ ಹಂತವಾಗಿ ಈ ಇಂಧನಗಳನ್ನು ನಿಷೇಧಿಸಿ ಪರ್ಯಾಯವಾಗಿ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆಗೆ ಲಭ್ಯವಿರುವ ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸರ್ಕಾರದ ಮೂಲಕ ಆರ್ಥಿಕ ಸಹಕಾರ ನೀಡಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡಬೇಕು ಎಂದರು.
ಸಭೆಯಲ್ಲಿ ಖಾಸಗಿ ಕಂಪನಿಯ ಪ್ರತಿನಿಧಿಗಳು ಮೀನುಗಾರಿಕೆಗೆ ಲಭ್ಯವಿರುವ ಎಲೆಕ್ಟ್ರಿಕ್ ಇಂಜಿನ್ ತಂತ್ರಜ್ಞಾನ, ಅನುಕೂಲತೆ ಹಾಗೂ ಲಭ್ಯತೆಗಳ ಬಗ್ಗೆ ಮೀನುಗಾರ ಮುಖಂಡರಿಗೆ ಮಾಹಿತಿ ನೀಡಿ, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ದಿನೇಶ್ ಕಲ್ಲೇರ್ ಹಾಗೂ ಕರಾವಳಿ ಜಿಲ್ಲೆಯ ವಿವಿಧ ಮೀನುಗಾರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…