Featured

ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ – vishwanews24

ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಗುರುವಾರ ಬೆಳಗಿನ ಜಾವ ಅದ್ದೂರಿಯಾಗಿ ಜರುಗುವುದರೊಂದಿಗೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.

ಕಾಪು ದಂಡಯಾತ್ರೆ ಮಧ್ಯರಾತ್ರಿ ಸ್ನಾನ ಮುಗಿಸಿದ ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಜೋಡುಕಟ್ಟೆ ಆಗಮಿಸಿದರು. ಬಳಿಕ ವೈಭವದ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹೊರಟ ಮೆರವಣಿಗೆ ಕೋರ್ಟ್ ರಸ್ತೆ, ಹಳೆಯ ಡಯನಾ ಸರ್ಕಲ್, ಐಡಿಯಲ್ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ರಥಬೀದಿಗೆ ಸಾಗಿ ಬಂತು.

ಮೆರವಣಿಗೆಯಲ್ಲಿ ಸಾಗಿದ ಜನಪದ ಕಲಾ ಪ್ರಕಾರಗಳು ಕಣ್ಮನ ಸೆಳೆದವು. ಸ್ತಬ್ಧಚಿತ್ರಗಳು, ಚೆಂಡೆಯ ನಾದ ಮೆರವಣಿಗೆಯ ಅಂದ ಹೆಚ್ಚಿಸಿದವು. ಜಗ್ಗಲಿಕೆ ವಾದ್ಯ, ಶ್ರೀಸಾಯಿ ಚೆಂಡೆ ಬಳಗ, ಪೂಜೆ ಕುಣಿತ, ಗೊರವರ ಕುಣಿತ, ಕೊಂಬು ಕಹಳೆ, ಪುಟಾಣಿಗಳಿಂದ ಮರಕಾಲು ಕುಣಿತ, ಕಂಗೀಲು ನೃತ್ಯ, ನಾಸಿಕ್ ಬ್ಯಾಂಡ್, ಗೊಂಬೆಯಾಟ, ಕೊಂಬೆ ಬಳಗ, ಹರೇ ರಾಮ ಹರೇ ಕೃಷ್ಣ, ಸಹಿತ ವಿವಿಧ ತಂಡಗಳು ಭಾಗಿಯಾಗಿದ್ದವರು ಅಯೋಧ್ಯೆಯ ರಾಮಮಂದಿರದ ಟ್ಯಾಬ್ಲೋ ಆಕರ್ಷಣಿಯವಾಗಿತ್ತು.

ನೂರಾರು ಟ್ಯಾಬ್ಲೋ, ಕಲಾತಂಡಗಳ ಬಳಿಕ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಾಹನದಲ್ಲಿರಿಸಿದ ಪಲ್ಲಕ್ಕಿಯಲ್ಲಿ ಕುಳಿತು ಸಾಗಿದರು.

ಗುರುವಾರ ಮುಂಜಾನೆ ಸುಮಾರು 2.30ಕ್ಕೆ ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆ ಸುಮಾರು ಎರಡು ಕಿ.ಮೀ ಸಾಗಿ ರಥಬೀದಿಯಲ್ಲಿ ಸಂಪನ್ನಗೊಂಡಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಭಾಳ್ಕರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಶಾಸಕರಾದ ಯಶಪಾಲ್ ಸುವರ್ಣ ಸಹಿತ ಹಲವು ಗಣ್ಯರು ಶೋಭಾಯಾತ್ರೆಯಲ್ಲಿ ಭಾಗಿಯಾದರು.

ಮೆರವಣಿಗೆಯ ಕೊನೆಯಲ್ಲಿ ನಗರಸಭೆಯಿಂದ ನೇಮಕ ಮಾಡಿದ್ದ ಪೌರ ಕಾರ್ಮಿಕರು ಇಡೀ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು. ಸುರಕ್ಷತೆಯ ದೃಷ್ಟಿಯಿಂದ ಬಿಗು ಪೊಲೀಸ್ ಭದ್ರತೆ ನೀಡಲಾಯಿತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago